ಬ್ರೇಕಿಂಗ್ ನ್ಯೂಸ್
05-04-26 10:45 pm HK News Staffer ಕರ್ನಾಟಕ
ಕೊಡಗು, ಎಪ್ರಿಲ್ 5: ಮಡಿಕೇರಿ ಬಳಿಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಹೋಗಿ ಕಾಡಿನಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಟೆಕ್ಕಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಸ್ಥಳೀಯ ಮಲೆಕುಡಿಯ ಸಮುದಾಯದ ಜನರ ಶೋಧ ಕಾರ್ಯ ಸಂದರ್ಭ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಮಹಿಳೆಯನ್ನು ಪತ್ತೆ ಮಾಡಲಾಗಿದೆ.
ಎಪ್ರಿಲ್ 2ರಂದು ಬೆಳಗ್ಗೆ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಕಾಡಿನಿಂದ ಹಿಂತಿರುಗುವಾಗ ನಾಪತ್ತೆಯಾಗಿದ್ದಳು. 36 ವರ್ಷದ ಶರಣ್ಯ ಒಬ್ಬಂಟಿಯಾಗೇ ನಾಲ್ಕು ದಿನಗಳಿಂದ ಕಾಡಿನಲ್ಲಿ ಸಿಕ್ಕಿಬಿದ್ದಿದ್ದ ಕಾರಣ ಆತಂಕ ವ್ಯಕ್ತವಾಗಿತ್ತು. ತಡಿಯಂಡಮೋಳ್ ಕರ್ನಾಟಕದ ಪಶ್ಚಿಮ ಘಟ್ಟದ ಸಾಲಿನ ಅತಿ ಎತ್ತರದ ಬೆಟ್ಟವಾಗಿದ್ದು ಪ್ರವಾಸಿಗರ ಆಕರ್ಷಕ ತಾಣವಾಗಿದೆ.

ಮಹಿಳೆ ನಾಪತ್ತೆ ಹಿನ್ನೆಲೆಯಲ್ಲಿ ಅರಣ್ಯ, ಪೊಲೀಸ್ ಇಲಾಖೆ ಮತ್ತು ಗ್ರಾಮಸ್ಥರು ಹಾಗೂ ನಕ್ಸಲ್ ನಿಗ್ರಹ ಪಡೆಯಿಂದ ನಿರಂತರ ಶೋಧ ನಡೆಸಲಾಗಿತ್ತು. ಈ ನಡುವೆ, ಸಿಎಂ ಸಿದ್ದರಾಮಯ್ಯ ಎಲ್ಲ ಸಾಮರ್ಥ್ಯ ಬಳಸಿಕೊಂಡು ಶೋಧ ಕಾರ್ಯಾಚರಣೆಗೆ ಸೂಚಿಸಿದ್ದರು. ಕೊನೆಗೂ ನಾಲ್ಕು ದಿನಗಳ ಸತತ ಹುಡುಕಾಟದ ಬಳಿಕ ಭಾನುವಾರ ಸಂಜೆ ಸ್ಥಳೀಯ ಮಲೆಕುಡಿಯ ಜನಾಂಗದ ಸದಸ್ಯರಿಗೆ ಶರಣ್ಯ ಪತ್ತೆಯಾಗಿದ್ದಾಳೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಸಂಚಾರ ಇರುವುದರಿಂದ ಮಹಿಳೆ ಕಾಡಾನೆ ದಾಳಿಗೆ ತುತ್ತಾಗಿದ್ದಾರೆಯೇ ಎಂಬ ಆತಂಕ ವ್ಯಕ್ತವಾಗಿತ್ತು. ರಾತ್ರಿ ಹಗಲು ಅನ್ನ ನೀರು ಇಲ್ಲದೆ ಬದುಕಿ ಉಳಿದಿರಬಹುದೇ ಎಂಬ ಆತಂಕವೂ ಕೇಳಿಬಂದಿತ್ತು.
ಪೊಲೀಸರು, ಅರಣ್ಯ ಸಿಬಂದಿ, ಡ್ರೋಣ್ ಶೋಧ, ನಕ್ಸಲ್ ನಿಗ್ರಹ ಪಡೆಗೂ ನಾಲ್ಕು ದಿನಗಳಿಂದ ಶರಣ್ಯ ಕಾಣಸಿಕ್ಕಿರಲಿಲ್ಲ. ಇದೀಗ ದಿಢೀರ್ ಎನ್ನುವಂತೆ ಕಾಡಿನ ಮಧ್ಯದಿಂದ ಮಲೆಕುಡಿಯ ಜನರು ಪತ್ತೆ ಮಾಡಿ ಸುರಕ್ಷಿತವಾಗಿ ಕರೆತಂದಿದ್ದಾರೆ.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm