ಬ್ರೇಕಿಂಗ್ ನ್ಯೂಸ್
05-04-26 10:45 pm HK News Staffer ಕರ್ನಾಟಕ
ಕೊಡಗು, ಎಪ್ರಿಲ್ 5: ಮಡಿಕೇರಿ ಬಳಿಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಹೋಗಿ ಕಾಡಿನಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಟೆಕ್ಕಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಸ್ಥಳೀಯ ಮಲೆಕುಡಿಯ ಸಮುದಾಯದ ಜನರ ಶೋಧ ಕಾರ್ಯ ಸಂದರ್ಭ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಮಹಿಳೆಯನ್ನು ಪತ್ತೆ ಮಾಡಲಾಗಿದೆ.
ಎಪ್ರಿಲ್ 2ರಂದು ಬೆಳಗ್ಗೆ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಕಾಡಿನಿಂದ ಹಿಂತಿರುಗುವಾಗ ನಾಪತ್ತೆಯಾಗಿದ್ದಳು. 36 ವರ್ಷದ ಶರಣ್ಯ ಒಬ್ಬಂಟಿಯಾಗೇ ನಾಲ್ಕು ದಿನಗಳಿಂದ ಕಾಡಿನಲ್ಲಿ ಸಿಕ್ಕಿಬಿದ್ದಿದ್ದ ಕಾರಣ ಆತಂಕ ವ್ಯಕ್ತವಾಗಿತ್ತು. ತಡಿಯಂಡಮೋಳ್ ಕರ್ನಾಟಕದ ಪಶ್ಚಿಮ ಘಟ್ಟದ ಸಾಲಿನ ಅತಿ ಎತ್ತರದ ಬೆಟ್ಟವಾಗಿದ್ದು ಪ್ರವಾಸಿಗರ ಆಕರ್ಷಕ ತಾಣವಾಗಿದೆ.

ಮಹಿಳೆ ನಾಪತ್ತೆ ಹಿನ್ನೆಲೆಯಲ್ಲಿ ಅರಣ್ಯ, ಪೊಲೀಸ್ ಇಲಾಖೆ ಮತ್ತು ಗ್ರಾಮಸ್ಥರು ಹಾಗೂ ನಕ್ಸಲ್ ನಿಗ್ರಹ ಪಡೆಯಿಂದ ನಿರಂತರ ಶೋಧ ನಡೆಸಲಾಗಿತ್ತು. ಈ ನಡುವೆ, ಸಿಎಂ ಸಿದ್ದರಾಮಯ್ಯ ಎಲ್ಲ ಸಾಮರ್ಥ್ಯ ಬಳಸಿಕೊಂಡು ಶೋಧ ಕಾರ್ಯಾಚರಣೆಗೆ ಸೂಚಿಸಿದ್ದರು. ಕೊನೆಗೂ ನಾಲ್ಕು ದಿನಗಳ ಸತತ ಹುಡುಕಾಟದ ಬಳಿಕ ಭಾನುವಾರ ಸಂಜೆ ಸ್ಥಳೀಯ ಮಲೆಕುಡಿಯ ಜನಾಂಗದ ಸದಸ್ಯರಿಗೆ ಶರಣ್ಯ ಪತ್ತೆಯಾಗಿದ್ದಾಳೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಸಂಚಾರ ಇರುವುದರಿಂದ ಮಹಿಳೆ ಕಾಡಾನೆ ದಾಳಿಗೆ ತುತ್ತಾಗಿದ್ದಾರೆಯೇ ಎಂಬ ಆತಂಕ ವ್ಯಕ್ತವಾಗಿತ್ತು. ರಾತ್ರಿ ಹಗಲು ಅನ್ನ ನೀರು ಇಲ್ಲದೆ ಬದುಕಿ ಉಳಿದಿರಬಹುದೇ ಎಂಬ ಆತಂಕವೂ ಕೇಳಿಬಂದಿತ್ತು.
ಪೊಲೀಸರು, ಅರಣ್ಯ ಸಿಬಂದಿ, ಡ್ರೋಣ್ ಶೋಧ, ನಕ್ಸಲ್ ನಿಗ್ರಹ ಪಡೆಗೂ ನಾಲ್ಕು ದಿನಗಳಿಂದ ಶರಣ್ಯ ಕಾಣಸಿಕ್ಕಿರಲಿಲ್ಲ. ಇದೀಗ ದಿಢೀರ್ ಎನ್ನುವಂತೆ ಕಾಡಿನ ಮಧ್ಯದಿಂದ ಮಲೆಕುಡಿಯ ಜನರು ಪತ್ತೆ ಮಾಡಿ ಸುರಕ್ಷಿತವಾಗಿ ಕರೆತಂದಿದ್ದಾರೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm