ಬ್ರೇಕಿಂಗ್ ನ್ಯೂಸ್
05-04-26 10:45 pm HK News Staffer ಕರ್ನಾಟಕ
ಕೊಡಗು, ಎಪ್ರಿಲ್ 5: ಮಡಿಕೇರಿ ಬಳಿಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಹೋಗಿ ಕಾಡಿನಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಟೆಕ್ಕಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಸ್ಥಳೀಯ ಮಲೆಕುಡಿಯ ಸಮುದಾಯದ ಜನರ ಶೋಧ ಕಾರ್ಯ ಸಂದರ್ಭ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಮಹಿಳೆಯನ್ನು ಪತ್ತೆ ಮಾಡಲಾಗಿದೆ.
ಎಪ್ರಿಲ್ 2ರಂದು ಬೆಳಗ್ಗೆ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಕಾಡಿನಿಂದ ಹಿಂತಿರುಗುವಾಗ ನಾಪತ್ತೆಯಾಗಿದ್ದಳು. 36 ವರ್ಷದ ಶರಣ್ಯ ಒಬ್ಬಂಟಿಯಾಗೇ ನಾಲ್ಕು ದಿನಗಳಿಂದ ಕಾಡಿನಲ್ಲಿ ಸಿಕ್ಕಿಬಿದ್ದಿದ್ದ ಕಾರಣ ಆತಂಕ ವ್ಯಕ್ತವಾಗಿತ್ತು. ತಡಿಯಂಡಮೋಳ್ ಕರ್ನಾಟಕದ ಪಶ್ಚಿಮ ಘಟ್ಟದ ಸಾಲಿನ ಅತಿ ಎತ್ತರದ ಬೆಟ್ಟವಾಗಿದ್ದು ಪ್ರವಾಸಿಗರ ಆಕರ್ಷಕ ತಾಣವಾಗಿದೆ.

ಮಹಿಳೆ ನಾಪತ್ತೆ ಹಿನ್ನೆಲೆಯಲ್ಲಿ ಅರಣ್ಯ, ಪೊಲೀಸ್ ಇಲಾಖೆ ಮತ್ತು ಗ್ರಾಮಸ್ಥರು ಹಾಗೂ ನಕ್ಸಲ್ ನಿಗ್ರಹ ಪಡೆಯಿಂದ ನಿರಂತರ ಶೋಧ ನಡೆಸಲಾಗಿತ್ತು. ಈ ನಡುವೆ, ಸಿಎಂ ಸಿದ್ದರಾಮಯ್ಯ ಎಲ್ಲ ಸಾಮರ್ಥ್ಯ ಬಳಸಿಕೊಂಡು ಶೋಧ ಕಾರ್ಯಾಚರಣೆಗೆ ಸೂಚಿಸಿದ್ದರು. ಕೊನೆಗೂ ನಾಲ್ಕು ದಿನಗಳ ಸತತ ಹುಡುಕಾಟದ ಬಳಿಕ ಭಾನುವಾರ ಸಂಜೆ ಸ್ಥಳೀಯ ಮಲೆಕುಡಿಯ ಜನಾಂಗದ ಸದಸ್ಯರಿಗೆ ಶರಣ್ಯ ಪತ್ತೆಯಾಗಿದ್ದಾಳೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಸಂಚಾರ ಇರುವುದರಿಂದ ಮಹಿಳೆ ಕಾಡಾನೆ ದಾಳಿಗೆ ತುತ್ತಾಗಿದ್ದಾರೆಯೇ ಎಂಬ ಆತಂಕ ವ್ಯಕ್ತವಾಗಿತ್ತು. ರಾತ್ರಿ ಹಗಲು ಅನ್ನ ನೀರು ಇಲ್ಲದೆ ಬದುಕಿ ಉಳಿದಿರಬಹುದೇ ಎಂಬ ಆತಂಕವೂ ಕೇಳಿಬಂದಿತ್ತು.
ಪೊಲೀಸರು, ಅರಣ್ಯ ಸಿಬಂದಿ, ಡ್ರೋಣ್ ಶೋಧ, ನಕ್ಸಲ್ ನಿಗ್ರಹ ಪಡೆಗೂ ನಾಲ್ಕು ದಿನಗಳಿಂದ ಶರಣ್ಯ ಕಾಣಸಿಕ್ಕಿರಲಿಲ್ಲ. ಇದೀಗ ದಿಢೀರ್ ಎನ್ನುವಂತೆ ಕಾಡಿನ ಮಧ್ಯದಿಂದ ಮಲೆಕುಡಿಯ ಜನರು ಪತ್ತೆ ಮಾಡಿ ಸುರಕ್ಷಿತವಾಗಿ ಕರೆತಂದಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm