ಬ್ರೇಕಿಂಗ್ ನ್ಯೂಸ್
06-04-26 08:51 pm HK News Staffer ಕರ್ನಾಟಕ
ಮೈಸೂರು, ಎಪ್ರಿಲ್ 6: ಎರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಬದಲಾವಣೆ ವದಂತಿಯನ್ನು ತಳ್ಳಿಹಾಕಿದರು. 2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ದರು. ಈ ಬಾರಿಯೂ ಪೂರ್ಣಾವಧಿ ಮುಗಿಸಬೇಕು ತಾನೇ ಎಂದು ಮರು ಪ್ರಶ್ನೆ ಹಾಕಿದರು.
ಹೈಕಮಾಂಡ್ ಯಾವ ಗೊಂದಲಗಳನ್ನೂ ಸೃಷ್ಟಿ ಮಾಡಿಲ್ಲ. ಯಾರು ಏನೇ ಹೇಳಿದರೂ ಅದು ಮುಖ್ಯ ಅಲ್ಲ. ಹೈಕಮಾಂಡ್ ಯಾವತ್ತಾದರೂ ಸಿದ್ದರಾಮಯ್ಯ ಅವಧಿ ಇಷ್ಟು ಅಂತ ಹೇಳಿದ್ಯಾ? ಬದಲಾವಣೆ ಬಗ್ಗೆ ಮಾತನಾಡಿದ್ದಾರಾ? ಅದರ ಅರ್ಥ ಆ ರೀತಿಯ ಯಾವ ಬೆಳವಣಿಗೆ ಇಲ್ಲ. ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್. ಅಲ್ಲಿಯವರೆಗೆ ಯಾರು ಏನೇ ಮಾತನಾಡಿದ್ರು ಅದು ವೈಯಕ್ತಿಕ ಅಭಿಪ್ರಾಯ ಎಂದರು.
ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಡಿಸಿಎಂ ಆಗಿದ್ದಾರೆ, ಅವರು ನಮ್ಮ ನಾಯಕರು, ಅವರಿಗೆ ಯಾವ ಸಮಸ್ಯೆಯೂ ಆಗಿಲ್ಲ. ನಮ್ಮ ಎಲ್ಲಾ ಶಾಸಕರು ಸಿಎಂ ಸ್ಥಾನಕ್ಕೆ ಅರ್ಹರು ಎಂದು ಸಿಎಂ ವಿಧಾನಸಭೆಯಲ್ಲೇ ಹೇಳಿದ್ದಾರೆ. ಅದರಲ್ಲಿ ನಾನು ಅರ್ಹ, ಇನ್ನೊಬ್ಬರು ಎಂಬ ಪ್ರಶ್ನೆಯೇ ಬರುವುದಿಲ್ಲ. ಉಪ ಚುನಾವಣೆಯ ಫಲಿತಾಂಶಕ್ಕೂ ಬೇರೆ ವಿಚಾರಕ್ಕೂ ಸಂಬಂಧವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಉಪ ಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದ ದಿಕ್ಸೂಚಿ ಅಲ್ಲ. ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡುವ ಮಾರ್ಕ್ಸ್ ಕೂಡ ಅಲ್ಲ. ಅದರ ಫಲಿತಾಂಶದ ಮೇಲೆ ಯಾವ ಬದಲಾವಣೆಯೂ ಆಗುವುದಿಲ್ಲ. ಎರಡು ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ. ಗ್ಯಾರಂಟಿ ಯೋಜನೆಗಳನ್ನು ಮೀರಿಯೂ ಈ ಸರ್ಕಾರದ ಆಡಳಿತ ದಕ್ಷತೆಗೆ ಜನ ಮತ ಹಾಕುತ್ತಾರೆ ಎಂದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm