ಬ್ರೇಕಿಂಗ್ ನ್ಯೂಸ್
07-04-26 12:37 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 07: ಅಕ್ರಮ ಆಸ್ತಿ ಸಂಪಾದನೆ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ, ಬೆಳಗಾವಿ ಹಾಗೂ ಮಂಡ್ಯ ಸೇರಿದಂತೆ ಹಲವು ಕಡೆಗಳಲ್ಲಿ ಮನೆಗಳು ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದು ಹಲವು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಚಿತ್ರದುರ್ಗ ; ಅಸಿಸ್ಟೆಂಟ್ ಅಕೌಂಟೆಂಟ್ ಮನೆ ಮೇಲೆ ದಾಳಿ
ಚಿತ್ರದುರ್ಗ ನಿರ್ಮಿತಿ ಕೇಂದ್ರದ ಅಸಿಸ್ಟೆಂಟ್ ಅಕೌಂಟೆಂಟ್ ಸುಶೀಲಮ್ಮ ಅವರ ಮೆದೇಹಳ್ಳಿ ರಸ್ತೆಯಲ್ಲಿರುವ ನಿವಾಸ ಹಾಗೂ ಹಿರಿಯೂರಿನ ಯಾರದಕಟ್ಟೆ ತೋಟದ ಮನೆಯಲ್ಲಿ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಎಸ್ಪಿ ವಾಸುದೇವ್ ರಾಮ್ ಮತ್ತು ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಬಳ್ಳಾರಿ: ಮೀನುಗಾರಿಕೆ ಇಲಾಖೆ ಅಧಿಕಾರಿ ಟಾರ್ಗೆಟ್
ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆದಿದೆ. ಸಿದ್ಧಾರ್ಥ್ ನಗರದಲ್ಲಿರುವ ನಿವಾಸ ಸೇರಿದಂತೆ ನಾಲ್ಕು ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದು, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ.
ಶಿವಮೊಗ್ಗ: ಜಿಲ್ಲಾ ಅಧಿಕಾರಿ ನಿವಾಸ–ಕಚೇರಿ ಪರಿಶೀಲನೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಅವರ ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆದಿದೆ. ತರಲಘಟ್ಟ, ಆನಂದಪುರ ಹಾಗೂ ಚಾಲುಕ್ಯ ನಗರ ಸೇರಿ ಹಲವು ಸ್ಥಳಗಳಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ತಂಡಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಬೆಳಗಾವಿ: ಚಿನ್ನಾಭರಣ, ಕೋಟ್ಯಾಂತರ ಠೇವಣಿ ಪತ್ತೆ
ಬೆಳಗಾವಿ ಜಿಲ್ಲೆಯ ನಗರಾಭಿವೃದ್ಧಿ ಕೋಶದ ಎಇಇ ಅಜಯ್ ಸಿಂಗ್ ರಜಪೂತ್ ಅವರ ಮನೆ ಮೇಲೆ ನಡೆದ ದಾಳಿಯಲ್ಲಿ ಒಂದು ಕೆಜಿ ಚಿನ್ನಾಭರಣ ಹಾಗೂ ಬ್ಯಾಂಕ್ನಲ್ಲಿ ಸುಮಾರು ₹2 ಕೋಟಿ ಠೇವಣಿ ಪತ್ತೆಯಾಗಿದೆ. ಬೆಳಗಾವಿ, ಅಥಣಿ ಮತ್ತು ಹುಕ್ಕೇರಿ ಸೇರಿ ಮೂರು ಸ್ಥಳಗಳಲ್ಲಿ ಪರಿಶೀಲನೆ ನಡೆದಿದೆ.
ಮಂಡ್ಯ: ಲೋಕೋಪಯೋಗಿ ಇಲಾಖೆ ಅಧಿಕಾರಿ ವಿರುದ್ಧ ದಾಳಿ
ಮಂಡ್ಯ ಲೋಕೋಪಯೋಗಿ ಇಲಾಖೆಯ ಎಇಇ ರೇವಣ್ಣ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಕೇಳಿಬಂದಿದ್ದು, ಮೈಸೂರು ಕಚೇರಿ ಹಾಗೂ ಮಂಡ್ಯದ ನಿವಾಸಗಳಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಮಾರ್ಗದರ್ಶನದಲ್ಲಿ ತಂಡ ಕಾರ್ಯಾಚರಣೆ ನಡೆಸಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm