ಬ್ರೇಕಿಂಗ್ ನ್ಯೂಸ್
07-04-26 03:51 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 7: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆಗೆ ಕಾಯುತ್ತಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರು ನಿಗದಿತ ಸಮಯದಲ್ಲಿ ಫಲಿತಾಂಶ ಬರದೆ ನಿರಾಸೆಗೊಂಡಿದ್ದರು. ಆರಂಭದಲ್ಲಿ ಇಂದು - ಏಪ್ರಿಲ್ 7ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಉಂಟಾದ ತಾಂತ್ರಿಕ ಹಾಗೂ ನಿರ್ವಹಣಾ ಸಮಸ್ಯೆಯಿಂದಾಗಿ ಪ್ರಕಟಣೆ ಮುಂದೂಡಲಾಗಿದ್ದು, ಇದೀಗ ಏಪ್ರಿಲ್ 9ರಂದು ದ್ವಿತೀಯ ಪಿಯಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಏಪ್ರಿಲ್ 9 ರಂದು ನಡೆಯುತ್ತಿದೆ. ಈ ಹಿನ್ನೆಲೆ ಚುನಾವಣಾ ನೀತಿ ಜಾರಿಯಲ್ಲಿದ್ದು, ಸರ್ಕಾರಿ ಅಧಿಕಾರಿಗಳು ಮತ್ತು ಸಚಿವರು ಪ್ರತ್ಯೇಕ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸುವುದಕ್ಕೆ ಆಯೋಗದ ಅನುಮತಿ ಪಡೆಯಬೇಕಾಗಿದೆ. ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಗೆ ಪತ್ರ ಬರೆದಿದ್ದು, ಅನುಮತಿ ಸಿಕ್ಕೊಡನೆ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲು ಸರ್ವ ಸಿದ್ಧತೆ ನಡೆಸಿದೆ.
ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಮೌಲ್ಯಮಾಪನ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಆಯೋಗದ ಅನುಮತಿ ಸಿಗುತ್ತಿದ್ದಂತೆ ಫಲಿತಾಂಶ ಬಿಡುಗಡೆ ಮಾಡಲಾಗುವುದು.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಬಿಡುಗಡೆ ಬಳಿಕ ವಿದ್ಯಾರ್ಥಿಗಳಿಗೆ ಅಧಿಕೃತ ಮಾಹಿತಿಯನ್ನು ನೀಡಲಿದ್ದಾರೆ.
10-09-26 05:10 pm
HK News Staffer
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 09:24 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
11-09-26 10:14 am
HK News Staffer
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm