ಬ್ರೇಕಿಂಗ್ ನ್ಯೂಸ್
07-04-26 07:26 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 7: ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಾರ್ಥನೆ ಸಮಯದಲ್ಲೂ ವಿಷಕಾರಿ ಹಾವು ಕಂಡರೆ ಅದನ್ನು ಕೊಲ್ಲಬೇಕು ಎಂದು ಕುರಾನ್ ಹೇಳುತ್ತದೆ. ಆರ್ಎಸ್ಎಸ್ ಮತ್ತು ಬಿಜೆಪಿ ನಮ್ಮ ನಡುವಿನ ವಿಷಕಾರಿ ಹಾವುಗಳಾಗಿವೆ. ಅವುಗಳನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದು ಖರ್ಗೆ ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ತೀವ್ರ ಟ್ರೋಲ್ ಆಗಿದ್ದು, ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ವಿರುದ್ಧ ಬಹಿರಂಗವಾಗಿ ಮಲ್ಲಿಕಾರ್ಜುನ ಖರ್ಗೆ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆಕ್ಷೇಪ ಕೇಳಿಬಂದಿದೆ. ಕುರಾನ್ನಲ್ಲಿ ನಮಾಜ್ ಮಾಡುವಾಗಲೂ ವಿಷಕಾರಿ ಹಾವನ್ನು ಕಂಡರೆ ಅದನ್ನು ಕೊಲ್ಲಬೇಕು ಎಂದು ಹೇಳಲಾಗಿದೆ. ಆರ್ಎಸ್ಎಸ್/ಬಿಜೆಪಿ ಕೂಡ ಅದೇ ರೀತಿಯ ಹಾವು. ನೀವು ಅವರನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದು ಖರ್ಗೆ ಹೇಳಿದ್ದಾರೆ.
ಖರ್ಗೆ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಪಕ್ಷದ ವಕ್ತಾರ ಶೆಹಜಾದ್ ಪೂನವಾಲಾ ಕಾಂಗ್ರೆಸ್ ಮೇಲೆ ಹಿಂಸೆಗೆ ಪ್ರೇರೇಪಿಸುತ್ತಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ಸದಸ್ಯರ ವಿರುದ್ಧ ಮುಸ್ಲಿಮರನ್ನು ಪ್ರಚೋದಿಸುತ್ತಿದೆ ಎಂದು ಆಕ್ಷೇಪಿಸಿದ್ದಾರೆ.
ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ ಪೂನಾವಾಲ, ಕಾಂಗ್ರೆಸ್ "ಇಂಡಿಯನ್ ಜಿಹಾದಿ ಕಾಂಗ್ರೆಸ್" ತರಹ ವರ್ತಿಸುತ್ತಿದೆ ಎಂದು ಟೀಕಿಸಿದ್ದು, ಈ ಹೇಳಿಕೆ ರಾಜಕೀಯ ವಿರೋಧಿಗಳ ವಿರುದ್ಧ ಪ್ರಚೋದನೆಗೆ ಸಮಾನವಾಗಿದೆ ಎಂದು ಹೇಳಿದರು. ಇದು ಕಾಂಗ್ರೆಸ್ನ ಅತ್ಯಂತ ಕೀಳುಮಟ್ಟ. ಇದು ಅತೀ ಅಪ್ರಜಾಸತ್ತಾತ್ಮಕ, ತುರ್ತು ಪರಿಸ್ಥಿತಿ ಮನೋಭಾವದ ಹೇಳಿಕೆ. ಚುನಾವಣಾ ಆಯೋಗವು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm