ಬ್ರೇಕಿಂಗ್ ನ್ಯೂಸ್
08-04-26 02:09 pm HK News Staffer ಕರ್ನಾಟಕ
ಚಿಕ್ಕಮಗಳೂರು, ಎಪ್ರಿಲ್ 8: ಮುಳ್ಳಯ್ಯನಗಿರಿಗೆ ಪ್ರವಾಸ ಬಂದಿದ್ದ ಕೇರಳದ ಕುಟುಂಬದ ಜೊತೆಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಕಾಡಿನ ಮಧ್ಯೆ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ನಾಪತ್ತೆಯಾದ ಬಾಲಕಿಯನ್ನು ಕೇರಳದ ಪಾಲಕ್ಕಾಡ್ ನಿವಾಸಿ ಶ್ರೀನಂದನ ಎಂದು ಗುರುತಿಸಲಾಗಿದೆ.
ಕೇರಳದ ಪಾಲಕ್ಕಾಡ್ ಮೂಲದ 15 ವರ್ಷದ ಬಾಲಕಿ, ತನ್ನ ಪೋಷಕರು ಹಾಗೂ ಸುಮಾರು 40 ಜನರ ತಂಡದೊಂದಿಗೆ ಮಂಗಳವಾರ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಏಪ್ರಿಲ್ 7ರ ಸಂಜೆ 6 ಗಂಟೆಯ ವೇಳೆಗೆ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಬಾಲಕಿ ಕಾಣೆಯಾಗಿದ್ದಾಳೆ. ಬಾಲಕಿ ಕಾಣೆಯಾಗುತ್ತಿದ್ದಂತೆ ಸ್ಥಳೀಯರು ಹಾಗೂ ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಯಾವುದೇ ಸುಳಿವು ಸಿಗಲಿಲ್ಲ. ಗಾಬರಿಗೊಂಡ ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು.
ಬಾಲಕಿ ನಾಪತ್ತೆಯಾದ ವಿಷಯ ತಿಳಿದು ಎಚ್ಚೆತ್ತ ಜಿಲ್ಲಾಡಳಿತ, ನಿನ್ನೆ ತಡರಾತ್ರಿ ವರೆಗೂ ಅರಣ್ಯ ಮತ್ತು ಪೊಲೀಸ್ ಇಲಾಖೆಯಿಂದ ಹುಡುಕಾಟ ನಡೆಸಿದೆ. ಸುಮಾರು 30ಕ್ಕೂ ಹೆಚ್ಚು ಪೊಲೀಸ್, ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ರಾತ್ರಿ 1 ಗಂಟೆಯ ವರೆಗೆ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದರು. ಆದರೆ, ದಟ್ಟವಾದ ಮಂಜು ಮತ್ತು ಭಾರೀ ಕತ್ತಲು ಆವರಿಸಿದ್ದರಿಂದ ರಾತ್ರಿ ಕಾರ್ಯಾಚರಣೆ ಸ್ಥಗಿತಗೊಳಿಸಿ ಸಿಬ್ಬಂದಿ ವಾಪಸ್ಸಾಗಿದ್ದರು.
ಇಂದು ಮುಂಜಾನೆಯಿಂದಲೇ ಶೋಧ ಕಾರ್ಯ ಆರಂಭಿಸಲಾಗಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸರ ತಂಡಗಳು ಬೆಟ್ಟದ ತಪ್ಪಲಿನಲ್ಲಿ ಹುಡುಕಾಡುತ್ತಿವೆ. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶ ಇರುವುದರಿಂದ ಬಾಲಕಿಯನ್ನು ಪತ್ತೆಹಚ್ಚಲು ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗಿದೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಅರಣ್ಯ ರಕ್ಷಕರು ವಿವಿಧ ತಂಡಗಳಾಗಿ ಶೋಧ ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದಷ್ಟೇ ಮಡಿಕೇರಿ ಬಳಿಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಹೋಗಿದ್ದ ಕೇರಳದ ಯುವತಿ ಶರಣ್ಯ ನಾಪತ್ತೆಯಾಗಿ ನಾಲ್ಕು ದಿನ ಕಾಡಿನಲ್ಲಿ ಅಂಡಲೆದು ಬಳಿಕ ಸ್ಥಳೀಯ ಮಲೆಕುಡಿಯ ಜನರಿಗೆ ಸಿಕ್ಕಿದ್ದರು. ಈ ಪ್ರಕರಣ ರಾಜ್ಯದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಅಂತಹದ್ದೇ ಮತ್ತೊಂದು ಎಡವಟ್ಟು ಉಂಟಾಗಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am