ಬ್ರೇಕಿಂಗ್ ನ್ಯೂಸ್
08-04-26 02:09 pm HK News Staffer ಕರ್ನಾಟಕ
ಚಿಕ್ಕಮಗಳೂರು, ಎಪ್ರಿಲ್ 8: ಮುಳ್ಳಯ್ಯನಗಿರಿಗೆ ಪ್ರವಾಸ ಬಂದಿದ್ದ ಕೇರಳದ ಕುಟುಂಬದ ಜೊತೆಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಕಾಡಿನ ಮಧ್ಯೆ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ನಾಪತ್ತೆಯಾದ ಬಾಲಕಿಯನ್ನು ಕೇರಳದ ಪಾಲಕ್ಕಾಡ್ ನಿವಾಸಿ ಶ್ರೀನಂದನ ಎಂದು ಗುರುತಿಸಲಾಗಿದೆ.
ಕೇರಳದ ಪಾಲಕ್ಕಾಡ್ ಮೂಲದ 15 ವರ್ಷದ ಬಾಲಕಿ, ತನ್ನ ಪೋಷಕರು ಹಾಗೂ ಸುಮಾರು 40 ಜನರ ತಂಡದೊಂದಿಗೆ ಮಂಗಳವಾರ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಏಪ್ರಿಲ್ 7ರ ಸಂಜೆ 6 ಗಂಟೆಯ ವೇಳೆಗೆ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಬಾಲಕಿ ಕಾಣೆಯಾಗಿದ್ದಾಳೆ. ಬಾಲಕಿ ಕಾಣೆಯಾಗುತ್ತಿದ್ದಂತೆ ಸ್ಥಳೀಯರು ಹಾಗೂ ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಯಾವುದೇ ಸುಳಿವು ಸಿಗಲಿಲ್ಲ. ಗಾಬರಿಗೊಂಡ ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು.
ಬಾಲಕಿ ನಾಪತ್ತೆಯಾದ ವಿಷಯ ತಿಳಿದು ಎಚ್ಚೆತ್ತ ಜಿಲ್ಲಾಡಳಿತ, ನಿನ್ನೆ ತಡರಾತ್ರಿ ವರೆಗೂ ಅರಣ್ಯ ಮತ್ತು ಪೊಲೀಸ್ ಇಲಾಖೆಯಿಂದ ಹುಡುಕಾಟ ನಡೆಸಿದೆ. ಸುಮಾರು 30ಕ್ಕೂ ಹೆಚ್ಚು ಪೊಲೀಸ್, ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ರಾತ್ರಿ 1 ಗಂಟೆಯ ವರೆಗೆ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದರು. ಆದರೆ, ದಟ್ಟವಾದ ಮಂಜು ಮತ್ತು ಭಾರೀ ಕತ್ತಲು ಆವರಿಸಿದ್ದರಿಂದ ರಾತ್ರಿ ಕಾರ್ಯಾಚರಣೆ ಸ್ಥಗಿತಗೊಳಿಸಿ ಸಿಬ್ಬಂದಿ ವಾಪಸ್ಸಾಗಿದ್ದರು.
ಇಂದು ಮುಂಜಾನೆಯಿಂದಲೇ ಶೋಧ ಕಾರ್ಯ ಆರಂಭಿಸಲಾಗಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸರ ತಂಡಗಳು ಬೆಟ್ಟದ ತಪ್ಪಲಿನಲ್ಲಿ ಹುಡುಕಾಡುತ್ತಿವೆ. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶ ಇರುವುದರಿಂದ ಬಾಲಕಿಯನ್ನು ಪತ್ತೆಹಚ್ಚಲು ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗಿದೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಅರಣ್ಯ ರಕ್ಷಕರು ವಿವಿಧ ತಂಡಗಳಾಗಿ ಶೋಧ ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದಷ್ಟೇ ಮಡಿಕೇರಿ ಬಳಿಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಹೋಗಿದ್ದ ಕೇರಳದ ಯುವತಿ ಶರಣ್ಯ ನಾಪತ್ತೆಯಾಗಿ ನಾಲ್ಕು ದಿನ ಕಾಡಿನಲ್ಲಿ ಅಂಡಲೆದು ಬಳಿಕ ಸ್ಥಳೀಯ ಮಲೆಕುಡಿಯ ಜನರಿಗೆ ಸಿಕ್ಕಿದ್ದರು. ಈ ಪ್ರಕರಣ ರಾಜ್ಯದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಅಂತಹದ್ದೇ ಮತ್ತೊಂದು ಎಡವಟ್ಟು ಉಂಟಾಗಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm