ಬ್ರೇಕಿಂಗ್ ನ್ಯೂಸ್
08-04-26 08:44 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 08: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಮತ್ತು ಬ್ಲಾಕ್ಮೇಲ್ ಆರೋಪ ಹೊರಿಸಿರುವ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಆದರೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಆ ಮಹಿಳೆಯೇ ನಿಗೂಢವಾಗಿ ನಾಪತ್ತೆಯಾಗಿರುವುದ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಪ್ರಸಾದ ಕೊಡುವ ನೆಪದಲ್ಲಿ ಸ್ವಾಮೀಜಿ ಮಹಿಳೆಯನ್ನು ಮಠಕ್ಕೆ ಕರೆಸಿ ಅಸಭ್ಯವಾಗಿ ವರ್ತಿಸಿದ್ದು, ಅದರ ವಿಡಿಯೋ ಮಾಡಿಕೊಂಡು ರಾತ್ರಿ ಸಮಯದಲ್ಲಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಬ್ಲಾಕ್ಮೇಲ್ ಮಾಡಲಾಗುತ್ತಿದೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆ ಪೊಲೀಸರು ಅಧಿಕೃತ ದೂರು ಪಡೆಯಲು ಮುಂದಾದಾಗ, ಮಹಿಳೆ ಸಂಪರ್ಕಕ್ಕೆ ಸಿಗದೇ ಇದ್ದು, ಫೋನ್ ಸ್ವಿಚ್ಡ್ ಆಫ್ ಆಗಿದೆ. ಮನೆಯಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಗೊಂದಲಕ್ಕೆ ತಳ್ಳಲ್ಪಟ್ಟಿದೆ.
ಇದಕ್ಕೂ ಮಧ್ಯೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಹನಿಟ್ರ್ಯಾಪ್ ದೂರು ದಾಖಲಿಸಿದ್ದಾರೆ. ಮಹಿಳೆ ಅನಾಥಾಶ್ರಮ ನಡೆಸುತ್ತಿರುವುದಾಗಿ ಸುಳ್ಳು ಹೇಳಿ ಪರಿಚಯ ಮಾಡಿಕೊಂಡು ಬಳಿಕ ತೇಜೋವಧೆ ಮಾಡುವುದಾಗಿ ಬೆದರಿಸಿ 3 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾಳೆ ಎಂದು ಸ್ವಾಮೀಜಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಮಹಿಳೆ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬೆಂಗಳೂರು, ಮಂಡ್ಯ, ವಿಜಯಪುರ ಸೇರಿದಂತೆ ವಿವಿಧ ಕಡೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು, ಮಹಿಳೆಯ ನಾಪತ್ತೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಸ್ವಾಮೀಜಿ ದೂರಿಗೆ ಭಯಪಟ್ಟು ತಲೆಮರೆಸಿಕೊಂಡಿರಬಹುದೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.
ಇದಲ್ಲದೆ, ಸ್ವಾಮೀಜಿಯದ್ದೆಂದು ಹೇಳಲಾಗುತ್ತಿರುವ ಕೆಲವು ಖಾಸಗಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ತಂದಿದೆ. ಒಂದು ಕಡೆ ಮಹಿಳೆಯ ಲೈಂಗಿಕ ದೌರ್ಜನ್ಯ ಆರೋಪ, ಮತ್ತೊಂದೆಡೆ ಸ್ವಾಮೀಜಿಯ ಹನಿಟ್ರ್ಯಾಪ್ ಪ್ರತಿದೂರು ಇವೆರಡರ ನಡುವೆ ನಿಜಾಂಶವೇನು ಎಂಬುದು ಪೊಲೀಸರ ತನಿಖೆಯಿಂದಲೇ ಹೊರಬರಬೇಕಾಗಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am