ಬ್ರೇಕಿಂಗ್ ನ್ಯೂಸ್
08-04-26 08:44 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 08: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಮತ್ತು ಬ್ಲಾಕ್ಮೇಲ್ ಆರೋಪ ಹೊರಿಸಿರುವ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಆದರೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಆ ಮಹಿಳೆಯೇ ನಿಗೂಢವಾಗಿ ನಾಪತ್ತೆಯಾಗಿರುವುದ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಪ್ರಸಾದ ಕೊಡುವ ನೆಪದಲ್ಲಿ ಸ್ವಾಮೀಜಿ ಮಹಿಳೆಯನ್ನು ಮಠಕ್ಕೆ ಕರೆಸಿ ಅಸಭ್ಯವಾಗಿ ವರ್ತಿಸಿದ್ದು, ಅದರ ವಿಡಿಯೋ ಮಾಡಿಕೊಂಡು ರಾತ್ರಿ ಸಮಯದಲ್ಲಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಬ್ಲಾಕ್ಮೇಲ್ ಮಾಡಲಾಗುತ್ತಿದೆ ಎಂದು ಮಹಿಳೆ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆ ಪೊಲೀಸರು ಅಧಿಕೃತ ದೂರು ಪಡೆಯಲು ಮುಂದಾದಾಗ, ಮಹಿಳೆ ಸಂಪರ್ಕಕ್ಕೆ ಸಿಗದೇ ಇದ್ದು, ಫೋನ್ ಸ್ವಿಚ್ಡ್ ಆಫ್ ಆಗಿದೆ. ಮನೆಯಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಗೊಂದಲಕ್ಕೆ ತಳ್ಳಲ್ಪಟ್ಟಿದೆ.
ಇದಕ್ಕೂ ಮಧ್ಯೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಹನಿಟ್ರ್ಯಾಪ್ ದೂರು ದಾಖಲಿಸಿದ್ದಾರೆ. ಮಹಿಳೆ ಅನಾಥಾಶ್ರಮ ನಡೆಸುತ್ತಿರುವುದಾಗಿ ಸುಳ್ಳು ಹೇಳಿ ಪರಿಚಯ ಮಾಡಿಕೊಂಡು ಬಳಿಕ ತೇಜೋವಧೆ ಮಾಡುವುದಾಗಿ ಬೆದರಿಸಿ 3 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾಳೆ ಎಂದು ಸ್ವಾಮೀಜಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಮಹಿಳೆ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬೆಂಗಳೂರು, ಮಂಡ್ಯ, ವಿಜಯಪುರ ಸೇರಿದಂತೆ ವಿವಿಧ ಕಡೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು, ಮಹಿಳೆಯ ನಾಪತ್ತೆಗೆ ಸಂಬಂಧಿಸಿದಂತೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಸ್ವಾಮೀಜಿ ದೂರಿಗೆ ಭಯಪಟ್ಟು ತಲೆಮರೆಸಿಕೊಂಡಿರಬಹುದೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.
ಇದಲ್ಲದೆ, ಸ್ವಾಮೀಜಿಯದ್ದೆಂದು ಹೇಳಲಾಗುತ್ತಿರುವ ಕೆಲವು ಖಾಸಗಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ತಂದಿದೆ. ಒಂದು ಕಡೆ ಮಹಿಳೆಯ ಲೈಂಗಿಕ ದೌರ್ಜನ್ಯ ಆರೋಪ, ಮತ್ತೊಂದೆಡೆ ಸ್ವಾಮೀಜಿಯ ಹನಿಟ್ರ್ಯಾಪ್ ಪ್ರತಿದೂರು ಇವೆರಡರ ನಡುವೆ ನಿಜಾಂಶವೇನು ಎಂಬುದು ಪೊಲೀಸರ ತನಿಖೆಯಿಂದಲೇ ಹೊರಬರಬೇಕಾಗಿದೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm