ಬ್ರೇಕಿಂಗ್ ನ್ಯೂಸ್
09-04-26 03:37 pm HK News Staffer ಕರ್ನಾಟಕ
ಮಡಿಕೇರಿ, ಎಪ್ರಿಲ್ 9: ಚಾರಣ ಬಂದು ದಿಢೀರ್ ನಾಪತ್ತೆಯಾಗಿ ಸಂಚಲನ ಮೂಡಿಸಿದ್ದ ಕೇರಳ ಮೂಲದ ಶರಣ್ಯ ಪ್ರಕರಣ ರಾಜಕೀಯ ಆಯಾಮ ಪಡೆದಿದ್ದು ಬಿಜೆಪಿ ನಾಯಕರು ನಕ್ಸಲ್ ಆರೋಪದ ಲಿಂಕ್ ಮಾಡಿದ್ದಾರೆ. ಶರಣ್ಯ ಪತ್ತೆಯಾದ ರೀತಿ ಮತ್ತು ಆಕೆಯ ನಡವಳಿಕೆ ಅನುಮಾನಗಳಿಗೆ ಎಡೆಮಾಡಿದ್ದು, 'ಕಾಣದ ಕೈಗಳ' ಕೈವಾಡವಿದೆ ಎಂದು ಮಡಿಕೇರಿ ಬಿಜೆಪಿ ಪ್ರಮುಖರು ಆರೋಪ ಮಾಡಿದ್ದಾರೆ.
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದು ಜಿಲ್ಲಾ ಬಿಜೆಪಿ ಗ್ರಾಮೀಣ ಮಂಡಲದ ಪ್ರಧಾನ ಕಾರ್ಯದರ್ಶಿ ಪಿ.ದಾನೋಜ್ ನೇತೃತ್ವದಲ್ಲಿ ಕಾರ್ಯಕರ್ತರು ನಾಪೋಕ್ಲು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಏಪ್ರಿಲ್ 2ರಂದು ಕಾಣೆಯಾಗಿದ್ದ ಕೇರಳ ಮೂಲದ 36 ವರ್ಷದ ಯುವತಿ ಶರಣ್ಯ ಅವರನ್ನು ನಾಲ್ಕು ದಿನಗಳ ಬಳಿಕ ಪತ್ತೆಹಚ್ಚಲಾಗಿತ್ತು.
ನೂರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಶೋಧ ನಡೆಸಿದರೂ ಮೂರು ದಿನಗಳ ಕಾಲ ಪತ್ತೆಯಾಗದ ಶರಣ್ಯ, ನಾಲ್ಕನೇ ದಿನ ಅರಣ್ಯದಲ್ಲಿ ಪತ್ತೆಯಾಗಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಶರಣ್ಯ ಅವರ ವರ್ತನೆ ಬಗ್ಗೆಯೂ ಶಂಕೆಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಶರಣ್ಯ ಒಂದು ವೇಳೆ ನಾಟಕ ಮಾಡಿದ್ದರೆ, ಸರ್ಕಾರದ ಹಣ ವ್ಯರ್ಥ ಮಾಡಿದ ಕಾರಣಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು. ಇಷ್ಟು ದಟ್ಟ ಅರಣ್ಯದಲ್ಲಿ ಆಹಾರವಿಲ್ಲದೆ ನಾಲ್ಕು ದಿನ ಉಳಿಯಲು ಸಾಧ್ಯವಿಲ್ಲ. ಕೆಲವು ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆಗಳು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಅನುಮಾನ ಹುಟ್ಟಿಸಿದೆ ಎಂದು ಆರೋಪಿಸಿದ್ದಾರೆ.
ಕೊಡಗು ಎಸ್ಪಿ ಬಿಂದು ಮಣಿ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾವುದೇ ಅನುಮಾನಗಳು ವ್ಯಕ್ತವಾಗದ ಕಾರಣ ಎಫ್ಐಆರ್ ದಾಖಲಿಸಲಾಗಿಲ್ಲ ಎಂದು ದೃಢಪಡಿಸಿದ್ದಾರೆ.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm