ಬ್ರೇಕಿಂಗ್ ನ್ಯೂಸ್
09-04-26 03:37 pm HK News Staffer ಕರ್ನಾಟಕ
ಮಡಿಕೇರಿ, ಎಪ್ರಿಲ್ 9: ಚಾರಣ ಬಂದು ದಿಢೀರ್ ನಾಪತ್ತೆಯಾಗಿ ಸಂಚಲನ ಮೂಡಿಸಿದ್ದ ಕೇರಳ ಮೂಲದ ಶರಣ್ಯ ಪ್ರಕರಣ ರಾಜಕೀಯ ಆಯಾಮ ಪಡೆದಿದ್ದು ಬಿಜೆಪಿ ನಾಯಕರು ನಕ್ಸಲ್ ಆರೋಪದ ಲಿಂಕ್ ಮಾಡಿದ್ದಾರೆ. ಶರಣ್ಯ ಪತ್ತೆಯಾದ ರೀತಿ ಮತ್ತು ಆಕೆಯ ನಡವಳಿಕೆ ಅನುಮಾನಗಳಿಗೆ ಎಡೆಮಾಡಿದ್ದು, 'ಕಾಣದ ಕೈಗಳ' ಕೈವಾಡವಿದೆ ಎಂದು ಮಡಿಕೇರಿ ಬಿಜೆಪಿ ಪ್ರಮುಖರು ಆರೋಪ ಮಾಡಿದ್ದಾರೆ.
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದು ಜಿಲ್ಲಾ ಬಿಜೆಪಿ ಗ್ರಾಮೀಣ ಮಂಡಲದ ಪ್ರಧಾನ ಕಾರ್ಯದರ್ಶಿ ಪಿ.ದಾನೋಜ್ ನೇತೃತ್ವದಲ್ಲಿ ಕಾರ್ಯಕರ್ತರು ನಾಪೋಕ್ಲು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಏಪ್ರಿಲ್ 2ರಂದು ಕಾಣೆಯಾಗಿದ್ದ ಕೇರಳ ಮೂಲದ 36 ವರ್ಷದ ಯುವತಿ ಶರಣ್ಯ ಅವರನ್ನು ನಾಲ್ಕು ದಿನಗಳ ಬಳಿಕ ಪತ್ತೆಹಚ್ಚಲಾಗಿತ್ತು.
ನೂರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಶೋಧ ನಡೆಸಿದರೂ ಮೂರು ದಿನಗಳ ಕಾಲ ಪತ್ತೆಯಾಗದ ಶರಣ್ಯ, ನಾಲ್ಕನೇ ದಿನ ಅರಣ್ಯದಲ್ಲಿ ಪತ್ತೆಯಾಗಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಶರಣ್ಯ ಅವರ ವರ್ತನೆ ಬಗ್ಗೆಯೂ ಶಂಕೆಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಶರಣ್ಯ ಒಂದು ವೇಳೆ ನಾಟಕ ಮಾಡಿದ್ದರೆ, ಸರ್ಕಾರದ ಹಣ ವ್ಯರ್ಥ ಮಾಡಿದ ಕಾರಣಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು. ಇಷ್ಟು ದಟ್ಟ ಅರಣ್ಯದಲ್ಲಿ ಆಹಾರವಿಲ್ಲದೆ ನಾಲ್ಕು ದಿನ ಉಳಿಯಲು ಸಾಧ್ಯವಿಲ್ಲ. ಕೆಲವು ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆಗಳು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಅನುಮಾನ ಹುಟ್ಟಿಸಿದೆ ಎಂದು ಆರೋಪಿಸಿದ್ದಾರೆ.
ಕೊಡಗು ಎಸ್ಪಿ ಬಿಂದು ಮಣಿ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾವುದೇ ಅನುಮಾನಗಳು ವ್ಯಕ್ತವಾಗದ ಕಾರಣ ಎಫ್ಐಆರ್ ದಾಖಲಿಸಲಾಗಿಲ್ಲ ಎಂದು ದೃಢಪಡಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm