ಬ್ರೇಕಿಂಗ್ ನ್ಯೂಸ್
09-04-26 03:37 pm HK News Staffer ಕರ್ನಾಟಕ
ಮಡಿಕೇರಿ, ಎಪ್ರಿಲ್ 9: ಚಾರಣ ಬಂದು ದಿಢೀರ್ ನಾಪತ್ತೆಯಾಗಿ ಸಂಚಲನ ಮೂಡಿಸಿದ್ದ ಕೇರಳ ಮೂಲದ ಶರಣ್ಯ ಪ್ರಕರಣ ರಾಜಕೀಯ ಆಯಾಮ ಪಡೆದಿದ್ದು ಬಿಜೆಪಿ ನಾಯಕರು ನಕ್ಸಲ್ ಆರೋಪದ ಲಿಂಕ್ ಮಾಡಿದ್ದಾರೆ. ಶರಣ್ಯ ಪತ್ತೆಯಾದ ರೀತಿ ಮತ್ತು ಆಕೆಯ ನಡವಳಿಕೆ ಅನುಮಾನಗಳಿಗೆ ಎಡೆಮಾಡಿದ್ದು, 'ಕಾಣದ ಕೈಗಳ' ಕೈವಾಡವಿದೆ ಎಂದು ಮಡಿಕೇರಿ ಬಿಜೆಪಿ ಪ್ರಮುಖರು ಆರೋಪ ಮಾಡಿದ್ದಾರೆ.
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದು ಜಿಲ್ಲಾ ಬಿಜೆಪಿ ಗ್ರಾಮೀಣ ಮಂಡಲದ ಪ್ರಧಾನ ಕಾರ್ಯದರ್ಶಿ ಪಿ.ದಾನೋಜ್ ನೇತೃತ್ವದಲ್ಲಿ ಕಾರ್ಯಕರ್ತರು ನಾಪೋಕ್ಲು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಏಪ್ರಿಲ್ 2ರಂದು ಕಾಣೆಯಾಗಿದ್ದ ಕೇರಳ ಮೂಲದ 36 ವರ್ಷದ ಯುವತಿ ಶರಣ್ಯ ಅವರನ್ನು ನಾಲ್ಕು ದಿನಗಳ ಬಳಿಕ ಪತ್ತೆಹಚ್ಚಲಾಗಿತ್ತು.
ನೂರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಶೋಧ ನಡೆಸಿದರೂ ಮೂರು ದಿನಗಳ ಕಾಲ ಪತ್ತೆಯಾಗದ ಶರಣ್ಯ, ನಾಲ್ಕನೇ ದಿನ ಅರಣ್ಯದಲ್ಲಿ ಪತ್ತೆಯಾಗಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ. ರಕ್ಷಣಾ ಕಾರ್ಯಾಚರಣೆಯ ಬಳಿಕ ಶರಣ್ಯ ಅವರ ವರ್ತನೆ ಬಗ್ಗೆಯೂ ಶಂಕೆಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಶರಣ್ಯ ಒಂದು ವೇಳೆ ನಾಟಕ ಮಾಡಿದ್ದರೆ, ಸರ್ಕಾರದ ಹಣ ವ್ಯರ್ಥ ಮಾಡಿದ ಕಾರಣಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು. ಇಷ್ಟು ದಟ್ಟ ಅರಣ್ಯದಲ್ಲಿ ಆಹಾರವಿಲ್ಲದೆ ನಾಲ್ಕು ದಿನ ಉಳಿಯಲು ಸಾಧ್ಯವಿಲ್ಲ. ಕೆಲವು ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆಗಳು ಸಕ್ರಿಯವಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಇನ್ನಷ್ಟು ಅನುಮಾನ ಹುಟ್ಟಿಸಿದೆ ಎಂದು ಆರೋಪಿಸಿದ್ದಾರೆ.
ಕೊಡಗು ಎಸ್ಪಿ ಬಿಂದು ಮಣಿ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾವುದೇ ಅನುಮಾನಗಳು ವ್ಯಕ್ತವಾಗದ ಕಾರಣ ಎಫ್ಐಆರ್ ದಾಖಲಿಸಲಾಗಿಲ್ಲ ಎಂದು ದೃಢಪಡಿಸಿದ್ದಾರೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm