ಬ್ರೇಕಿಂಗ್ ನ್ಯೂಸ್
10-04-26 03:25 pm HK News Desk ಕರ್ನಾಟಕ
ಚಿಕ್ಕಮಗಳೂರು, ಎಪ್ರಿಲ್ 10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ಪ್ರವಾಸಿಗರ ತಂಡದಿಂದ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (14) ಅವರ ಮೃತದೇಹ ಇಂದು (ಏಪ್ರಿಲ್ 10) ಪತ್ತೆಯಾಗಿದೆ. ಮಾಣಿಕ್ಯಧಾರಾ ಬಳಿಯ ಅತ್ಯಂತ ಕಡಿದಾದ ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಸಿಕ್ಕಿರುವುದು ದೃಢಪಟ್ಟಿದೆ.
ಏಪ್ರಿಲ್ 7ರಂದು ಕೇರಳದಿಂದ 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದ ಶ್ರೀನಂದಾ, ದತ್ತಪೀಠ ಹಾಗೂ ಮಾಣಿಕ್ಯಧಾರಾ ದರ್ಶನದ ಬಳಿಕ ಹಠಾತ್ತಾಗಿ ನಾಪತ್ತೆಯಾಗಿದ್ದರು. ಬಾಲಕಿಯ ಪತ್ತೆಗಾಗಿ ಎಸ್ಡಿಆರ್ಎಫ್, ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಎಎನ್ಎಫ್ ತಂಡಗಳು ಜಂಟಿಯಾಗಿ ಬೃಹತ್ ಕಾರ್ಯಾಚರಣೆ ನಡೆಸಿದ್ದವು. ದಟ್ಟ ಅರಣ್ಯದ ನಡುವೆ ಡ್ರೋನ್ ಮತ್ತು ಥರ್ಮಲ್ ಕ್ಯಾಮೆರಾಗಳನ್ನು ಬಳಸಿ ಶೋಧ ನಡೆಸಲಾಗಿತ್ತು.
ಶುಕ್ರವಾರ ಮಧ್ಯಾಹ್ನದ ವೇಳೆ ಪ್ರಪಾತದ ತಳಭಾಗದಲ್ಲಿ ಮೃತದೇಹ ಪತ್ತೆಯಾಗಿದ್ದು, ಬಾಲಕಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆಯೋ, ಬೇರೇನಾದರೂ ಕೈವಾಡ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಯಬೇಕಷ್ಟೆ. ಮಗಳ ಮೃತದೇಹ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಪ್ರವಾಸಿ ತಾಣದಲ್ಲಿ ಶೋಕದ ಛಾಯೆ ಆವರಿಸಿದೆ. ಎರಡು ದಿನವಾದರೂ ಮಗಳ ಪತ್ತೆಯಾಗದ ಹಿನ್ನೆಲೆಯಲ್ಲಿ ತಾಯಿ, ಮಗಳು ಎಲ್ಲಿಯೂ ಬಿದ್ದಿರಲಿಕ್ಕಿಲ್ಲ. ಯಾವುದೋ ಅಮಲು ಪದಾರ್ಥ ಕೊಟ್ಟು ಅಪಹರಿಸಿರುವ ಶಂಕೆ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಬಾಲಕಿಯ ಶವ ಆಳ ಪ್ರತಾಪದಲ್ಲಿ ಕಂಡುಬಂದಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
A 14-year-old girl from Kerala, who had gone missing during a tourist trip three days ago, was found dead near Manikyadhara Falls in the Chandradrona hill ranges on Friday. The deceased has been identified as Sreenanda, a native of Palakkad, Kerala. Her body was recovered from a steep gorge nearly 2,000 feet deep near the falls.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm