ಬ್ರೇಕಿಂಗ್ ನ್ಯೂಸ್
10-04-26 06:53 pm HK News Desk ಕರ್ನಾಟಕ
ಬಳ್ಳಾರಿ, ಎಪ್ರಿಲ್ 10: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪ್ರಥಮ ದರ್ಜೆ (ಶೇ. 80.1)ಯಲ್ಲಿ ಪಾಸ್ ಆಗುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾನೆ.
ಬೆಂಗಳೂರು ಮೂಲದ ಎಸ್.ಅಶೋಕ್ ಕುಮಾರ್ ಎಂಬಾತ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು ಕಳೆದ 7 ವರ್ಷಗಳಿಂದ ಬಳ್ಳಾರಿ ಜೈಲಿನಲ್ಲಿದ್ದಾನೆ. ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಅಶೋಕ್ ಕುಮಾರ್, ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಇಂಗಿತ ವ್ಯಕ್ತಪಡಿಸಿದ್ದ. ಇದಕ್ಕೆ ಸಹಕರಿಸಿದ ಜೈಲಿನ ಅಧಿಕಾರಿಗಳು ದೂರ ಶಿಕ್ಷಣದ ಮೂಲಕ ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಇತಿಹಾಸದಲ್ಲಿ 94, ಅರ್ಥಶಾಸ್ತ್ರದಲ್ಲಿ 84 ಮತ್ತು ಕನ್ನಡದಲ್ಲಿ 82 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳ ಸಾಲಿನಲ್ಲಿ ಗಮನ ಸೆಳೆದಿದ್ದಾನೆ.
ಅಶೋಕ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರೂ ಜೈಲು ಸೆಲ್ ನಲ್ಲಿ ಓದುವ ಅಭ್ಯಾಸ ರೂಢಿಸಿಕೊಂಡಿದ್ದ. ಹೀಗಾಗಿ ಖಾಸಗಿಯಾಗಿ ಪರೀಕ್ಷೆ ಬರೆದು ಇದೀಗ ಫಸ್ಟ್ ಕ್ಲಾಸ್ನಲ್ಲಿ ಪಾಸಾಗಿದ್ದಾನೆ. ಮುಂದಿನ ದಿನಗಳಲ್ಲಿ ಪದವಿ ಶಿಕ್ಷಣದ ಬಗ್ಗೆ ಆಸಕ್ತಿ ತೋರಿದಲ್ಲಿ ಅದಕ್ಕೂ ಅವಕಾಶ ಮಾಡಲಾಗುವುದು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೀವಾವಧಿ ಶಿಕ್ಷೆಗೊಳಗಾದ ಕೈದಿಗಳಲ್ಲಿ ಒಬ್ಬರಾದ ಅಶೋಕ್, ಪಿಯುಸಿ ಪರೀಕ್ಷೆಯಲ್ಲಿ 80.1% ಅಂಕಗಳನ್ನು ಪಡೆದಿರುವುದು ಹೃದಯಸ್ಪರ್ಶಿಯಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಜೈಲು ಅಧಿಕಾರಿಗಳ ಬೆಂಗಾವಲಿನೊಂದಿಗೆ ಪರೀಕ್ಷೆಗೆ ಹಾಜರಾಗಿದ್ದರು. ಮುಂದಿನ ಉತ್ತಮ ಭವಿಷ್ಯದ ಬಗೆಗಿನ ಅವರ ಭರವಸೆಯನ್ನು ಜೈಲಿನ ಗೋಡೆಗಳು ಇನ್ನೂ ಹುಸಿಗೊಳಿಸಿಲ್ಲ ಎಂಬುದನ್ನು ಕಂಡು ಸಂತೋಷವಾಯಿತು ಎಂದು ಬರೆದುಕೊಂಡಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm