ಬ್ರೇಕಿಂಗ್ ನ್ಯೂಸ್
10-04-26 06:53 pm HK News Desk ಕರ್ನಾಟಕ
ಬಳ್ಳಾರಿ, ಎಪ್ರಿಲ್ 10: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಕೈದಿಯೊಬ್ಬ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪ್ರಥಮ ದರ್ಜೆ (ಶೇ. 80.1)ಯಲ್ಲಿ ಪಾಸ್ ಆಗುವ ಮೂಲಕ ರಾಜ್ಯದ ಗಮನ ಸೆಳೆದಿದ್ದಾನೆ.
ಬೆಂಗಳೂರು ಮೂಲದ ಎಸ್.ಅಶೋಕ್ ಕುಮಾರ್ ಎಂಬಾತ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು ಕಳೆದ 7 ವರ್ಷಗಳಿಂದ ಬಳ್ಳಾರಿ ಜೈಲಿನಲ್ಲಿದ್ದಾನೆ. ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಅಶೋಕ್ ಕುಮಾರ್, ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಇಂಗಿತ ವ್ಯಕ್ತಪಡಿಸಿದ್ದ. ಇದಕ್ಕೆ ಸಹಕರಿಸಿದ ಜೈಲಿನ ಅಧಿಕಾರಿಗಳು ದೂರ ಶಿಕ್ಷಣದ ಮೂಲಕ ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಇತಿಹಾಸದಲ್ಲಿ 94, ಅರ್ಥಶಾಸ್ತ್ರದಲ್ಲಿ 84 ಮತ್ತು ಕನ್ನಡದಲ್ಲಿ 82 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳ ಸಾಲಿನಲ್ಲಿ ಗಮನ ಸೆಳೆದಿದ್ದಾನೆ.
ಅಶೋಕ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರೂ ಜೈಲು ಸೆಲ್ ನಲ್ಲಿ ಓದುವ ಅಭ್ಯಾಸ ರೂಢಿಸಿಕೊಂಡಿದ್ದ. ಹೀಗಾಗಿ ಖಾಸಗಿಯಾಗಿ ಪರೀಕ್ಷೆ ಬರೆದು ಇದೀಗ ಫಸ್ಟ್ ಕ್ಲಾಸ್ನಲ್ಲಿ ಪಾಸಾಗಿದ್ದಾನೆ. ಮುಂದಿನ ದಿನಗಳಲ್ಲಿ ಪದವಿ ಶಿಕ್ಷಣದ ಬಗ್ಗೆ ಆಸಕ್ತಿ ತೋರಿದಲ್ಲಿ ಅದಕ್ಕೂ ಅವಕಾಶ ಮಾಡಲಾಗುವುದು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಡಿಜಿಪಿ ಅಲೋಕ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೀವಾವಧಿ ಶಿಕ್ಷೆಗೊಳಗಾದ ಕೈದಿಗಳಲ್ಲಿ ಒಬ್ಬರಾದ ಅಶೋಕ್, ಪಿಯುಸಿ ಪರೀಕ್ಷೆಯಲ್ಲಿ 80.1% ಅಂಕಗಳನ್ನು ಪಡೆದಿರುವುದು ಹೃದಯಸ್ಪರ್ಶಿಯಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಜೈಲು ಅಧಿಕಾರಿಗಳ ಬೆಂಗಾವಲಿನೊಂದಿಗೆ ಪರೀಕ್ಷೆಗೆ ಹಾಜರಾಗಿದ್ದರು. ಮುಂದಿನ ಉತ್ತಮ ಭವಿಷ್ಯದ ಬಗೆಗಿನ ಅವರ ಭರವಸೆಯನ್ನು ಜೈಲಿನ ಗೋಡೆಗಳು ಇನ್ನೂ ಹುಸಿಗೊಳಿಸಿಲ್ಲ ಎಂಬುದನ್ನು ಕಂಡು ಸಂತೋಷವಾಯಿತು ಎಂದು ಬರೆದುಕೊಂಡಿದ್ದಾರೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm