ಬ್ರೇಕಿಂಗ್ ನ್ಯೂಸ್
13-04-26 04:20 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 13: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಸಿಗದ ಕಾರಣಕ್ಕೆ ಪ್ರಚಾರದಿಂದ ದೂರ ಉಳಿದಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಹೈಕಮಾಂಡ್ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಇನ್ನೂ ರಾಜೀನಾಮೆ ಕೊಟ್ಟಿಲ್ಲ. ಕೊಡಬಹುದು ಅಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಹೈಕಮಾಂಡ್ ತಾಕೀತು ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ದಾವಣಗೆರೆ ಉಪ ಚುನಾವಣೆಯ ಉಸ್ತುವಾರಿಗೆ ಹೈಕಮಾಂಡ್ ಎಐಸಿಸಿ ಕಾರ್ಯದರ್ಶಿಯನ್ನು ನೇಮಿಸಿತ್ತು. ಅವರು ನೀಡಿದ ವರದಿ ಮೇಲೆ ಹೈಕಮಾಂಡ್ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು. ಕಾಂಗ್ರೆಸ್ನ ಅಲ್ಪಸಂಖ್ಯಾತ ನಾಯಕರ ನಡುವೆ ಹೊತ್ತಿಕೊಂಡ ‘ಹುನ್ನಾರದ ಕಿಡಿ’ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಸ್ಥಾನಕ್ಕೂ ಸಂಚಕಾರ ತಂದೊಡ್ಡಿದೆ. ನಸೀರ್ಗೆ ರಾಜೀನಾಮೆ ನೀಡುವಂತೆ ಅಧಿಕಾರಿಗಳ ಮೂಲಕ ಸ್ವತಃ ಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ. ಇದನ್ನು ಖುದ್ದು ತಮ್ಮ ಆಪ್ತರ ಬಳಿ ನಸೀರ್ ಅಹಮದ್ ಹೇಳಿಕೊಂಡಿದ್ದಾರೆ.
ಭಾನುವಾರ ಇಡೀ ದಿನ ನಸೀರ್ ಅಹಮದ್, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಳವಣಿಗೆಗಳ ಬಗ್ಗೆ ಮನವರಿಕೆ ಮಾಡಲು ಯತ್ನಿಸಿದ್ದಾರೆ. ಆದರೆ, ಸಿಎಂ ಭೇಟಿ ಸಾಧ್ಯವಾಗಿಲ್ಲ. ಇದರಿಂದಾಗಿ ಬೇಸರದಿಂದ ಹಿಂತಿರುಗಿದ್ದಾರೆ. ಈ ಮಧ್ಯೆ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ ಅವರು ಸಿಎಂ ಜತೆ ಮಾತುಕತೆ ನಡೆಸಿದ್ದು, ರಾಜೀನಾಮೆ ಪಡೆಯಲು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಸೀರ್ ಅಹಮದ್ ಅವರ ವಿಧಾನ ಪರಿಷತ್ತಿನ ಸದಸ್ಯತ್ವ ಅವಧಿ ಬರುವ ಮೇನಲ್ಲಿ ಪೂರ್ಣಗೊಳ್ಳಲಿದೆ. ಹಾಗಾಗಿ, ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಪಡೆಯುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ. ಒಂದು ದಿನದ ಹಿಂದಷ್ಟೇ ನಸೀರ್ ಅವರಿಗೆ ತಮ್ಮ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಪಕ್ಷವು ಕಾರಣ ಕೇಳಿ ನೋಟಿಸ್ ನೀಡಿತ್ತು.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm