ಬ್ರೇಕಿಂಗ್ ನ್ಯೂಸ್
13-04-26 09:49 pm HK News Staffer ಕರ್ನಾಟಕ
ಸುಳ್ಯ, ಎಪ್ರಿಲ್ 13: ಅಕಸ್ಮಾತ್ ಪಾಳು ಬಾವಿಗೆ ಬಿದ್ದ ಒಂಟಿ ಸಲಗವೊಂದನ್ನು ಎಂಟು ಗಂಟೆಗಳ ಕಾರ್ಯಾಚರಣೆಯ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪೆರಾಜೆ ಗ್ರಾಮದಲ್ಲಿ ನಡೆದಿದೆ.
ಪೆರಾಜೆ ಗ್ರಾಮದ ಕಲ್ಲಚರ್ಪ ಎಂಬಲ್ಲಿನ ನಿವಾಸಿ ರಾಮ ನಾಯ್ಕ ಎಂಬವರ ತೋಟದಲ್ಲಿ ಎಪ್ರಿಲ್ 12ರ ಭಾನುವಾರ ರಾತ್ರಿ 11 ಗಂಟೆ ವೇಳೆಗೆ ಆನೆ ಘೀಳಿಡುವ ಶಬ್ದ ಕೇಳಿಸಿತ್ತು. ಈ ಪ್ರದೇಶದಲ್ಲಿ ಆನೆಗಳು ಘೀಳಿಡೋದು ಸಾಮಾನ್ಯ ಎಂದುಕೊಂಡರೂ ನಿರಂತರವಾಗಿ ಬೊಬ್ಬೆ ಹಾಕಿದ್ದನ್ನು ಕೇಳಿ ಏನೋ ಸಂಭವಿಸಿದೆ ಎಂದು ಸಂಶಯ ಮೂಡಿತ್ತು. ಸ್ಥಳೀಯರು ಬಳಿಕ ತೋಟದಲ್ಲಿ ನೋಡಿದಾಗ ಕಾಡಾನೆಯೊಂದು 30 ಅಡಿ ಆಳದ ಪಾಳು ಬಾವಿಯಲ್ಲಿ ಬಿದ್ದಿರೋದು ಕಾಣಿಸಿದೆ. ತಕ್ಷಣವೇ ಸ್ಥಳೀಯ ಅರಣ್ಯ ಇಲಾಖೆಯ ಗಮನಕ್ಕೆ ತರಲಾಗಿತ್ತು.





ಬಾವಿ ಎತ್ತರದ ಭಾಗದಲ್ಲಿದ್ದು, ಅಡ್ಡಲಾಗಿ ಹೊಂಡ ತೋಡಿಯೇ ಆನೆಯನ್ನು ರಕ್ಷಿಸಲು ಸಾಧ್ಯ ಎಂದು ಮನಗಂಡ ಅಧಿಕಾರಿಗಳು ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಬಾವಿಗೆ ಸಮನಾಗಿ ಜೆಸಿಬಿಯಿಂದ ಮಣ್ಣು ಕೊರೆದು ಆ ಮೂಲಕ ಆನೆಯನ್ನು ಬಾವಿಯಿಂದ ಹೊರ ತೆಗೆಯಲು ಪ್ಲಾನ್ ಮಾಡಲಾಗಿತ್ತು. ಅದರಂತೆ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಕಾರ್ಯಾಚರಣೆ ಆರಂಭಿಸಿದ್ದು ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಂಡಿದೆ. ಆನೆಯನ್ನು ಬಾವಿಯಿಂದ ನೇರವಾಗಿ ಕಾಡಿಗೆ ಕಳುಹಿಸಲು ಯೋಜನೆ ಹಾಕಲಾಗಿತ್ತಾದರೂ, ಬಾವಿಯಿಂದ ಹೊರ ಬಂದ ಆನೆ ನೇರವಾಗಿ ಮೊದಲಿಗೆ ಅಲ್ಲಿದ್ದ ಜೆಸಿಬಿಯನ್ನೇ ಟಾರ್ಗೆಟ್ ಮಾಡಿದೆ. ಬಳಿಕ ಪಕ್ಕದಲ್ಲೇ ಇದ್ದ ಕೃಷಿ ತೋಟದ ಮಧ್ಯೆ ಓಡಿ ಮರೆಯಾಗಿದೆ.
ಆನೆಯನ್ನು ಪಟಾಕಿ ಸಿಡಿಸುವ ಮೂಲಕ ಕೃಷಿ ತೋಟದಿಂದ ಪೂವಾಜೆ ರಕ್ಷಿತಾರಣ್ಯಕ್ಕೆ ಸೇರಿಸುವ ಕೆಲಸವನ್ನು ಅರಣ್ಯ ಸಿಬ್ಬಂದಿ ಮಾಡಿದ್ದಾರೆ. ಸುಮಾರು 150 ಕ್ಕೂ ಮಿಕ್ಕಿದ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm