ಬ್ರೇಕಿಂಗ್ ನ್ಯೂಸ್
13-04-26 09:49 pm HK News Staffer ಕರ್ನಾಟಕ
ಸುಳ್ಯ, ಎಪ್ರಿಲ್ 13: ಅಕಸ್ಮಾತ್ ಪಾಳು ಬಾವಿಗೆ ಬಿದ್ದ ಒಂಟಿ ಸಲಗವೊಂದನ್ನು ಎಂಟು ಗಂಟೆಗಳ ಕಾರ್ಯಾಚರಣೆಯ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪೆರಾಜೆ ಗ್ರಾಮದಲ್ಲಿ ನಡೆದಿದೆ.
ಪೆರಾಜೆ ಗ್ರಾಮದ ಕಲ್ಲಚರ್ಪ ಎಂಬಲ್ಲಿನ ನಿವಾಸಿ ರಾಮ ನಾಯ್ಕ ಎಂಬವರ ತೋಟದಲ್ಲಿ ಎಪ್ರಿಲ್ 12ರ ಭಾನುವಾರ ರಾತ್ರಿ 11 ಗಂಟೆ ವೇಳೆಗೆ ಆನೆ ಘೀಳಿಡುವ ಶಬ್ದ ಕೇಳಿಸಿತ್ತು. ಈ ಪ್ರದೇಶದಲ್ಲಿ ಆನೆಗಳು ಘೀಳಿಡೋದು ಸಾಮಾನ್ಯ ಎಂದುಕೊಂಡರೂ ನಿರಂತರವಾಗಿ ಬೊಬ್ಬೆ ಹಾಕಿದ್ದನ್ನು ಕೇಳಿ ಏನೋ ಸಂಭವಿಸಿದೆ ಎಂದು ಸಂಶಯ ಮೂಡಿತ್ತು. ಸ್ಥಳೀಯರು ಬಳಿಕ ತೋಟದಲ್ಲಿ ನೋಡಿದಾಗ ಕಾಡಾನೆಯೊಂದು 30 ಅಡಿ ಆಳದ ಪಾಳು ಬಾವಿಯಲ್ಲಿ ಬಿದ್ದಿರೋದು ಕಾಣಿಸಿದೆ. ತಕ್ಷಣವೇ ಸ್ಥಳೀಯ ಅರಣ್ಯ ಇಲಾಖೆಯ ಗಮನಕ್ಕೆ ತರಲಾಗಿತ್ತು.





ಬಾವಿ ಎತ್ತರದ ಭಾಗದಲ್ಲಿದ್ದು, ಅಡ್ಡಲಾಗಿ ಹೊಂಡ ತೋಡಿಯೇ ಆನೆಯನ್ನು ರಕ್ಷಿಸಲು ಸಾಧ್ಯ ಎಂದು ಮನಗಂಡ ಅಧಿಕಾರಿಗಳು ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಬಾವಿಗೆ ಸಮನಾಗಿ ಜೆಸಿಬಿಯಿಂದ ಮಣ್ಣು ಕೊರೆದು ಆ ಮೂಲಕ ಆನೆಯನ್ನು ಬಾವಿಯಿಂದ ಹೊರ ತೆಗೆಯಲು ಪ್ಲಾನ್ ಮಾಡಲಾಗಿತ್ತು. ಅದರಂತೆ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಕಾರ್ಯಾಚರಣೆ ಆರಂಭಿಸಿದ್ದು ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಂಡಿದೆ. ಆನೆಯನ್ನು ಬಾವಿಯಿಂದ ನೇರವಾಗಿ ಕಾಡಿಗೆ ಕಳುಹಿಸಲು ಯೋಜನೆ ಹಾಕಲಾಗಿತ್ತಾದರೂ, ಬಾವಿಯಿಂದ ಹೊರ ಬಂದ ಆನೆ ನೇರವಾಗಿ ಮೊದಲಿಗೆ ಅಲ್ಲಿದ್ದ ಜೆಸಿಬಿಯನ್ನೇ ಟಾರ್ಗೆಟ್ ಮಾಡಿದೆ. ಬಳಿಕ ಪಕ್ಕದಲ್ಲೇ ಇದ್ದ ಕೃಷಿ ತೋಟದ ಮಧ್ಯೆ ಓಡಿ ಮರೆಯಾಗಿದೆ.
ಆನೆಯನ್ನು ಪಟಾಕಿ ಸಿಡಿಸುವ ಮೂಲಕ ಕೃಷಿ ತೋಟದಿಂದ ಪೂವಾಜೆ ರಕ್ಷಿತಾರಣ್ಯಕ್ಕೆ ಸೇರಿಸುವ ಕೆಲಸವನ್ನು ಅರಣ್ಯ ಸಿಬ್ಬಂದಿ ಮಾಡಿದ್ದಾರೆ. ಸುಮಾರು 150 ಕ್ಕೂ ಮಿಕ್ಕಿದ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm