ಬ್ರೇಕಿಂಗ್ ನ್ಯೂಸ್
13-04-26 09:49 pm HK News Staffer ಕರ್ನಾಟಕ
ಸುಳ್ಯ, ಎಪ್ರಿಲ್ 13: ಅಕಸ್ಮಾತ್ ಪಾಳು ಬಾವಿಗೆ ಬಿದ್ದ ಒಂಟಿ ಸಲಗವೊಂದನ್ನು ಎಂಟು ಗಂಟೆಗಳ ಕಾರ್ಯಾಚರಣೆಯ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪೆರಾಜೆ ಗ್ರಾಮದಲ್ಲಿ ನಡೆದಿದೆ.
ಪೆರಾಜೆ ಗ್ರಾಮದ ಕಲ್ಲಚರ್ಪ ಎಂಬಲ್ಲಿನ ನಿವಾಸಿ ರಾಮ ನಾಯ್ಕ ಎಂಬವರ ತೋಟದಲ್ಲಿ ಎಪ್ರಿಲ್ 12ರ ಭಾನುವಾರ ರಾತ್ರಿ 11 ಗಂಟೆ ವೇಳೆಗೆ ಆನೆ ಘೀಳಿಡುವ ಶಬ್ದ ಕೇಳಿಸಿತ್ತು. ಈ ಪ್ರದೇಶದಲ್ಲಿ ಆನೆಗಳು ಘೀಳಿಡೋದು ಸಾಮಾನ್ಯ ಎಂದುಕೊಂಡರೂ ನಿರಂತರವಾಗಿ ಬೊಬ್ಬೆ ಹಾಕಿದ್ದನ್ನು ಕೇಳಿ ಏನೋ ಸಂಭವಿಸಿದೆ ಎಂದು ಸಂಶಯ ಮೂಡಿತ್ತು. ಸ್ಥಳೀಯರು ಬಳಿಕ ತೋಟದಲ್ಲಿ ನೋಡಿದಾಗ ಕಾಡಾನೆಯೊಂದು 30 ಅಡಿ ಆಳದ ಪಾಳು ಬಾವಿಯಲ್ಲಿ ಬಿದ್ದಿರೋದು ಕಾಣಿಸಿದೆ. ತಕ್ಷಣವೇ ಸ್ಥಳೀಯ ಅರಣ್ಯ ಇಲಾಖೆಯ ಗಮನಕ್ಕೆ ತರಲಾಗಿತ್ತು.





ಬಾವಿ ಎತ್ತರದ ಭಾಗದಲ್ಲಿದ್ದು, ಅಡ್ಡಲಾಗಿ ಹೊಂಡ ತೋಡಿಯೇ ಆನೆಯನ್ನು ರಕ್ಷಿಸಲು ಸಾಧ್ಯ ಎಂದು ಮನಗಂಡ ಅಧಿಕಾರಿಗಳು ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಬಾವಿಗೆ ಸಮನಾಗಿ ಜೆಸಿಬಿಯಿಂದ ಮಣ್ಣು ಕೊರೆದು ಆ ಮೂಲಕ ಆನೆಯನ್ನು ಬಾವಿಯಿಂದ ಹೊರ ತೆಗೆಯಲು ಪ್ಲಾನ್ ಮಾಡಲಾಗಿತ್ತು. ಅದರಂತೆ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಕಾರ್ಯಾಚರಣೆ ಆರಂಭಿಸಿದ್ದು ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಂಡಿದೆ. ಆನೆಯನ್ನು ಬಾವಿಯಿಂದ ನೇರವಾಗಿ ಕಾಡಿಗೆ ಕಳುಹಿಸಲು ಯೋಜನೆ ಹಾಕಲಾಗಿತ್ತಾದರೂ, ಬಾವಿಯಿಂದ ಹೊರ ಬಂದ ಆನೆ ನೇರವಾಗಿ ಮೊದಲಿಗೆ ಅಲ್ಲಿದ್ದ ಜೆಸಿಬಿಯನ್ನೇ ಟಾರ್ಗೆಟ್ ಮಾಡಿದೆ. ಬಳಿಕ ಪಕ್ಕದಲ್ಲೇ ಇದ್ದ ಕೃಷಿ ತೋಟದ ಮಧ್ಯೆ ಓಡಿ ಮರೆಯಾಗಿದೆ.
ಆನೆಯನ್ನು ಪಟಾಕಿ ಸಿಡಿಸುವ ಮೂಲಕ ಕೃಷಿ ತೋಟದಿಂದ ಪೂವಾಜೆ ರಕ್ಷಿತಾರಣ್ಯಕ್ಕೆ ಸೇರಿಸುವ ಕೆಲಸವನ್ನು ಅರಣ್ಯ ಸಿಬ್ಬಂದಿ ಮಾಡಿದ್ದಾರೆ. ಸುಮಾರು 150 ಕ್ಕೂ ಮಿಕ್ಕಿದ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am