ಬ್ರೇಕಿಂಗ್ ನ್ಯೂಸ್
31-07-20 11:24 am Bangalore Correspondent ಕರ್ನಾಟಕ
ಬೆಂಗಳೂರು (ಜು. 31): ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಕಮಲ್ ಪಂತ್ ಇಂದು ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಪೊಲೀಸ್ ಕಮಿಷನರ್ ಆಗಿದ್ದ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಇಂದು ಸಂಜೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಕರಿಸಲಿದ್ದಾರೆ. 1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಕಮಲ್ ಪಂತ್ ಮೂಲತಃ ಉತ್ತರಾಂಚಲದ ಪಿತೋರ್ಗಢದವರು. ಭೂಗೋಳಶಾಸ್ತ್ರದಲ್ಲಿ ಎಂಎಸ್ ಸಿ ಪದವಿ ಪಡೆದಿರುವ ಕಮಲ್ಪಂತ್ 1990ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಅಯ್ಕೆಯಾಗಿದ್ದರು.
ಗುಲ್ಬರ್ಗಾದಲ್ಲಿ ಪ್ರೊಬೆಷನರಿ ಎಎಸ್ಪಿ ಪೊಲೀಸ್ ಸೇವೆ ಆರಂಭಿಸಿದ ಕಮಲ್ ಪಂತ್ ಬಳಿಕ ಶಿವಮೊಗ್ಗದ ಭದ್ರಾವತಿಯಲ್ಲಿ ಎಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಬಳಿಕ ಶಿವಮೊಗ್ಗ ಹಾಗೂ ಮಂಗಳೂರಿನಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದ ಕಮಲ್ ಪಂತ್ ಕೇಂದ್ರ ವಲಯ ಐಜಿಪಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾಎ. ನಂತರ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದರು. ಬಳಿಕ ಆಂತರಿಕ ಭದ್ರತಾ ವಿಭಾಗ ಎಡಿಜಿಪಿ ಆಗಿ ಕಾರ್ಯ ನಿರ್ವಹಣೆ ಮಾಡಿದರು. ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿದ ಕಮಲ್ ಪಂತ್ ಇದೀಗ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂತ್ ಜಾಗಕ್ಕೆ 1994ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ.
ಆ. 1ಕ್ಕೆ ಭಾಸ್ಕರ್ ರಾವ್ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಒಂದು ವರ್ಷ ಪೂರ್ಣವಾಗುತ್ತಿತ್ತು. ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ಕಮಿಷನರ್ ಆಗಿ ಕಮಲ್ ಪಂತ್ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಗಾಗಿ ಕಮಲ್ ಪಂತ್ ಮತ್ತು ಸುನಿಲ್ ಅಗರ್ವಾಲ್ ಅವರ ನಡುವೆ ಪೈಪೋಟಿ ನಡೆದಿತ್ತು. ಕೊನೆಗೂ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದಾರೆ.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm