ಬ್ರೇಕಿಂಗ್ ನ್ಯೂಸ್
31-07-20 11:24 am Bangalore Correspondent ಕರ್ನಾಟಕ
ಬೆಂಗಳೂರು (ಜು. 31): ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಕಮಲ್ ಪಂತ್ ಇಂದು ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಪೊಲೀಸ್ ಕಮಿಷನರ್ ಆಗಿದ್ದ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಇಂದು ಸಂಜೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಕರಿಸಲಿದ್ದಾರೆ. 1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಕಮಲ್ ಪಂತ್ ಮೂಲತಃ ಉತ್ತರಾಂಚಲದ ಪಿತೋರ್ಗಢದವರು. ಭೂಗೋಳಶಾಸ್ತ್ರದಲ್ಲಿ ಎಂಎಸ್ ಸಿ ಪದವಿ ಪಡೆದಿರುವ ಕಮಲ್ಪಂತ್ 1990ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಅಯ್ಕೆಯಾಗಿದ್ದರು.
ಗುಲ್ಬರ್ಗಾದಲ್ಲಿ ಪ್ರೊಬೆಷನರಿ ಎಎಸ್ಪಿ ಪೊಲೀಸ್ ಸೇವೆ ಆರಂಭಿಸಿದ ಕಮಲ್ ಪಂತ್ ಬಳಿಕ ಶಿವಮೊಗ್ಗದ ಭದ್ರಾವತಿಯಲ್ಲಿ ಎಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಬಳಿಕ ಶಿವಮೊಗ್ಗ ಹಾಗೂ ಮಂಗಳೂರಿನಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದ ಕಮಲ್ ಪಂತ್ ಕೇಂದ್ರ ವಲಯ ಐಜಿಪಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾಎ. ನಂತರ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದರು. ಬಳಿಕ ಆಂತರಿಕ ಭದ್ರತಾ ವಿಭಾಗ ಎಡಿಜಿಪಿ ಆಗಿ ಕಾರ್ಯ ನಿರ್ವಹಣೆ ಮಾಡಿದರು. ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿದ ಕಮಲ್ ಪಂತ್ ಇದೀಗ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂತ್ ಜಾಗಕ್ಕೆ 1994ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ.
ಆ. 1ಕ್ಕೆ ಭಾಸ್ಕರ್ ರಾವ್ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಒಂದು ವರ್ಷ ಪೂರ್ಣವಾಗುತ್ತಿತ್ತು. ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ಕಮಿಷನರ್ ಆಗಿ ಕಮಲ್ ಪಂತ್ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಗಾಗಿ ಕಮಲ್ ಪಂತ್ ಮತ್ತು ಸುನಿಲ್ ಅಗರ್ವಾಲ್ ಅವರ ನಡುವೆ ಪೈಪೋಟಿ ನಡೆದಿತ್ತು. ಕೊನೆಗೂ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದಾರೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm