ಬ್ರೇಕಿಂಗ್ ನ್ಯೂಸ್
31-07-20 11:24 am Bangalore Correspondent ಕರ್ನಾಟಕ
ಬೆಂಗಳೂರು (ಜು. 31): ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಕಮಲ್ ಪಂತ್ ಇಂದು ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಪೊಲೀಸ್ ಕಮಿಷನರ್ ಆಗಿದ್ದ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಇಂದು ಸಂಜೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಕರಿಸಲಿದ್ದಾರೆ. 1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಕಮಲ್ ಪಂತ್ ಮೂಲತಃ ಉತ್ತರಾಂಚಲದ ಪಿತೋರ್ಗಢದವರು. ಭೂಗೋಳಶಾಸ್ತ್ರದಲ್ಲಿ ಎಂಎಸ್ ಸಿ ಪದವಿ ಪಡೆದಿರುವ ಕಮಲ್ಪಂತ್ 1990ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಅಯ್ಕೆಯಾಗಿದ್ದರು.
ಗುಲ್ಬರ್ಗಾದಲ್ಲಿ ಪ್ರೊಬೆಷನರಿ ಎಎಸ್ಪಿ ಪೊಲೀಸ್ ಸೇವೆ ಆರಂಭಿಸಿದ ಕಮಲ್ ಪಂತ್ ಬಳಿಕ ಶಿವಮೊಗ್ಗದ ಭದ್ರಾವತಿಯಲ್ಲಿ ಎಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಬಳಿಕ ಶಿವಮೊಗ್ಗ ಹಾಗೂ ಮಂಗಳೂರಿನಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದ ಕಮಲ್ ಪಂತ್ ಕೇಂದ್ರ ವಲಯ ಐಜಿಪಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾಎ. ನಂತರ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದರು. ಬಳಿಕ ಆಂತರಿಕ ಭದ್ರತಾ ವಿಭಾಗ ಎಡಿಜಿಪಿ ಆಗಿ ಕಾರ್ಯ ನಿರ್ವಹಣೆ ಮಾಡಿದರು. ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿದ ಕಮಲ್ ಪಂತ್ ಇದೀಗ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂತ್ ಜಾಗಕ್ಕೆ 1994ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ.
ಆ. 1ಕ್ಕೆ ಭಾಸ್ಕರ್ ರಾವ್ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಒಂದು ವರ್ಷ ಪೂರ್ಣವಾಗುತ್ತಿತ್ತು. ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ಕಮಿಷನರ್ ಆಗಿ ಕಮಲ್ ಪಂತ್ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಗಾಗಿ ಕಮಲ್ ಪಂತ್ ಮತ್ತು ಸುನಿಲ್ ಅಗರ್ವಾಲ್ ಅವರ ನಡುವೆ ಪೈಪೋಟಿ ನಡೆದಿತ್ತು. ಕೊನೆಗೂ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದಾರೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm