ಬ್ರೇಕಿಂಗ್ ನ್ಯೂಸ್
15-04-26 07:05 pm HK News Staffer ಕರ್ನಾಟಕ
ಮಂಡ್ಯ, ಎಪ್ರಿಲ್ 15: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠದಲ್ಲಿಂದು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಬಾಲಗಂಗಾಧರನಾಥ ಸ್ವಾಮಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಭವ್ಯ ದೇಗುಲವನ್ನು ಪ್ರಧಾನಿಗಳು ಉದ್ಘಾಟಿಸಿ, ಸ್ವಾಮಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು.
ಉದ್ಘಾಟನೆಯ ವೇಳೆ ಪ್ರಧಾನಿ ಮೋದಿ ಅವರ ಜೊತೆಗೆ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಕುಮಾರಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಅವರು ಉಪಸ್ಥಿತರಿದ್ದರು. ದ್ರಾವಿಡ, ಚಾಲುಕ್ಯ, ಹೊಯ್ಸಳ ಮತ್ತು ಗಂಗರ ಶೈಲಿಯ ವಿನ್ಯಾಸಗಳನ್ನು ಒಳಗೊಂಡಿರುವ ಈ ಮಂದಿರವು ಒಡಿಶಾದ ಸೂರ್ಯ ದೇವಾಲಯದ ನಿರ್ಮಾಣದಿಂದ ಪ್ರೇರಣೆ ಪಡೆದಿದೆ. ಸುಮಾರು ಹತ್ತು ವರ್ಷಗಳ ನಿರಂತರ ಪರಿಶ್ರಮದಿಂದ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಮಂದಿರವು ವಾಸ್ತುಶಿಲ್ಪಿ ಶಂಕರ್ ಸ್ಥಪತಿ ಅವರ ಮೇಲ್ವಿಚಾರಣೆಯಲ್ಲಿ ತಲೆಯೆತ್ತಿ ನಿಂತಿದೆ.
ಆದಿಚುಂಚನಗಿರಿ ಮಠದ 71ನೇ ಪೀಠಾಧ್ಯಕ್ಷರಾಗಿದ್ದ ಜಗದ್ಗುರು ಪದ್ಮಭೂಷಣ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಯವರ ಸಮಾಧಿ ಸ್ಥಳವೂ ಇದಾಗಿದೆ. ಶ್ರೀಗಳು ಜನವರಿ 13, 2013ರಂದು ಲಿಂಗೈಕ್ಯರಾದರು. ಅವರ ದಿವ್ಯ ಸ್ಮರಣೆ ಹಾಗೂ ಭಕ್ತರ ದರ್ಶನಕ್ಕಾಗಿ ಅತ್ಯಂತ ಶ್ರದ್ಧೆಯಿಂದ ಈ ಭವ್ಯ ಮಂದಿರವನ್ನು ನಿರ್ಮಿಸಲಾಗಿದೆ.
ಇದೇ ವೇಳೆ, ಮೋದಿಯವರು ವಿಕಸಿತ ಕರ್ನಾಟಕ ಮತ್ತು ವಿಕಸಿತ ಭಾರತ ಗುರಿ ಸಾಧಿಸಲು ಒಂಬತ್ತು ತಪಸ್ಸು ಕೈಗೊಳ್ಳಲು ಕರೆ ನೀಡಿದರು. ತಮ್ಮ ಆದ್ಯತೆಗಳನ್ನು ವಿವರಿಸಿದ ಪ್ರಧಾನಿ ಮೋದಿ, ಆದ್ಯತೆಯಾಗಿ ನೀರಿನ ಸಂರಕ್ಷಣೆ ಮತ್ತು ಉತ್ತಮ ನೀರು ನಿರ್ವಹಣೆ ಬಗ್ಗೆ ಮಹತ್ವ ಸಾರಿದರು. ನಂತರ 'Ek Ped Maa Ke Naam' (ತಾಯಿಯ ಹೆಸರಿನಲ್ಲಿ ಒಂದು ಮರ) ಅಭಿಯಾನದಡಿ ಮರ ನೆಡುವುದು, ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದು, “ವೋಕಲ್ ಫಾರ್ ಲೋಕಲ್” ಮೂಲಕ ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸುವುದು, ದೇಶೀಯ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವುದು, ರಾಸಾಯನಿಕ ರಹಿತ ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವುದು, ಸಿರಿಧಾನ್ಯಗಳನ್ನು ಒಳಗೊಂಡ ಆರೋಗ್ಯಕರ ಆಹಾರ ಮತ್ತು ಕಡಿಮೆ ಎಣ್ಣೆ ಬಳಕೆಯನ್ನು ಉತ್ತೇಜಿಸುವಂತೆ ಕರೆ ನೀಡಿದರು.




ಇದರ ಜೊತೆಗೆ ಯೋಗ ಮತ್ತು ಫಿಟ್ನೆಸ್ನ್ನು ಅಳವಡಿಸಿಕೊಳ್ಳುವಂತೆ, ಸೇವಾಭಾವವನ್ನು ಬೆಳೆಸುವಂತೆ ಕೂಡ ಅವರು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ಮುಖ್ಯಸ್ಥ ಹೆಚ್.ಡಿ. ದೇವೇಗೌಡ ಅವರೊಂದಿಗೆ ‘ಸೌಂದರ್ಯ ಲಹರಿ ಮತ್ತು ಶಿವ ಮಹಿಮ್ನಾ ಸ್ತೋತ್ರಂ’ ಪುಸ್ತಕವನ್ನು ಬಿಡುಗಡೆ ಮಾಡಿದರು.
ಮಂದಿರ ಉದ್ಘಾಟನೆಗೂ ಮೊದಲು ಪ್ರಧಾನಮಂತ್ರಿಗಳು ಜ್ವಾಲಾ ಪೀಠವನ್ನು ಭೇಟಿ ಮಾಡಿ ಪೂಜೆ ಸಲ್ಲಿಸಿದರು. ಪೌರಾಣಿಕ ಕಥೆಗಳ ಪ್ರಕಾರ ಇಲ್ಲಿ ಶಿವನು ತಪಸ್ಸು ಮಾಡಿದನೆಂದು ನಂಬಿಕೆ ಇದೆ. ನಂತರ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ತಾವರ್ಚಂದ್ ಗೆಹ್ಲೋಟ್, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಇಂದಿನ ಪೀಠಾಧಿಪತಿ ನಿರ್ಮಲಾನಂದನಾಥ ಮಹಾಸ್ವಾಮಿಗಳು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am