ಬ್ರೇಕಿಂಗ್ ನ್ಯೂಸ್
16-04-26 07:37 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 16: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗಳಿಗೆ ಅಂಕಗಳ ಬದಲು ಗ್ರೇಡ್ ನೀಡಿ ಮತ್ತು ವಾರ್ಷಿಕ ಪರೀಕ್ಷೆಯ ಒಟ್ಟು ಅಂಕವನ್ನು 525ಕ್ಕೆ ಇಳಿಸಿ ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟಿನಲ್ಲಿ ತೀವ್ರ ಹಿನ್ನಡೆಯಾಗಿದೆ.
ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸರ್ಕಾರದ ದಿಢೀರ್ ನಿರ್ಧಾರದಿಂದ ಆತಂಕಕ್ಕೊಳಗಾಗಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ನಿರಾಳವಾದಂತಾಗಿದೆ.
ಹಿಂದಿ ವಿಷಯಕ್ಕೆ ಅಂಕಗಳ ಬದಲಿಗೆ ಕೇವಲ ಎ, ಬಿ, ಸಿ ಅಂತಹ ಗ್ರೇಡ್ಗಳನ್ನು ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್ ಹಾಗೂ ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಇಎಸ್ ಇಂದಿರೇಶ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.
ಸರ್ಕಾರದ ಈ ಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಮಾರಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಶಿಕ್ಷಣ ಹಕ್ಕು ಮತ್ತು ಪರೀಕ್ಷಾ ನಿಯಮಾವಳಿಗಳ ಪ್ರಕಾರ ಪ್ರತಿ ವಿಷಯದ ಅಂಕಗಳು ಪಾರದರ್ಶಕವಾಗಿರಬೇಕು. ತೃತೀಯ ಭಾಷೆಯನ್ನು ಕೇವಲ ಗ್ರೇಡ್ಗೆ ಸೀಮಿತಗೊಳಿಸುವುದು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಯಪೀಠ ಎಚ್ಚರಿಸಿದೆ.
ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರಿಂದ ವ್ಯತಿರಿಕ್ತ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಈ ವಿವಾದವು ಕೇವಲ ಅಂಕಗಳಿಗೆ ಸೀಮಿತವಾಗದೆ, ಭಾಷಾ ನೀತಿಯ ಸಂಘರ್ಷವಾಗಿಯೂ ಬದಲಾಗಿತ್ತು. ತೃತೀಯ ಭಾಷೆಗೆ ಅಂಕ ನೀಡದಿದ್ದರೆ ವಿದ್ಯಾರ್ಥಿಗಳು ಆ ವಿಷಯದ ಕಡೆಗೆ ಆಸಕ್ತಿ ಕಳೆದುಕೊಳ್ಳುತ್ತಾರೆ ಮತ್ತು ಇದು ಭವಿಷ್ಯದಲ್ಲಿ ಉದ್ಯೋಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವರಿಗೆ ಹಿನ್ನಡೆಯಾಗಬಹುದು ಎಂಬ ವಾದ ಕೇಳಿಬಂದಿತ್ತು. ಈಗ ಹೈಕೋರ್ಟ್ ನೀಡಿದ ಆದೇಶವು ಸರ್ಕಾರದ ವಿವಾದಾತ್ಮಕ ನಿರ್ಧಾರಕ್ಕೆ ಬ್ರೇಕ್ ಹಾಕಿದೆ.
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
16-05-26 10:24 pm
HK News Desk
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್ ಅಭ್ಯ...
16-05-26 11:46 am
ಮಾರುತಿ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕ ಗೋವು ಸಾಗಾಟ...
15-05-26 11:08 pm