ಬ್ರೇಕಿಂಗ್ ನ್ಯೂಸ್
16-04-26 10:30 pm HK News Staffer ಕರ್ನಾಟಕ
ಬೆಂಗಳೂರು, ಏ 16: ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಈ ವರ್ಷದ ಜೂನ್ ನಲ್ಲಿ ಸಲೀಂ ಅವರು ನಿವೃತ್ತರಾಗಬೇಕಿತ್ತು. ಆದರೆ ರಾಜ್ಯ ಸರ್ಕಾರ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.
2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ರಾಜ್ಯದ 43ನೇ ಡಿಜಿ-ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ಡಿಜಿಪಿಗೆ ಕನಿಷ್ಠ 2 ವರ್ಷಗಳ ಅಧಿಕಾರಾವಧಿ ಇರಬೇಕು. ಹೀಗಾಗಿ 22.09.2006ರ ಸರ್ವೋಚ್ಚ ನ್ಯಾಯಾಲಯದ ಪ್ರಕಾಶ್ ಸಿಂಗ್ vs ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪಿನ ಅನುಸಾರ ಡಿಜಿ & ಐಜಿಪಿ ಎಂ.ಎ.ಸಲೀಂ ಅವರ ಅವಧಿ ಒಟ್ಟು 2 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ.
2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ, ಇನ್ನೊಂದು ವರ್ಷ ಅಂದರೆ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.
ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದು, ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು. ಅಲ್ಲದೇ ಪ್ರಮುಖವಾಗಿ ಬೆಂಗಳೂರು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ಅನೇಕ ಸಂಚಾರ ಸುಧಾರಣೆ ಜಾರಿಗೆ ತಂದು ಜನಪ್ರಿಯರಾಗಿದ್ದರು.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm