ಬ್ರೇಕಿಂಗ್ ನ್ಯೂಸ್
17-04-26 01:39 pm HK News Staffer ಕರ್ನಾಟಕ
ಯಾದಗಿರಿ, ಏಪ್ರಿಲ್ 17: ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ದುರ್ಮರಣ ಹೊಂದಿರುವ ಘಟನೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ VRL ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಎಲ್ಲ ಆರು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದ ಪರಿಣಾಮ ಎರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ನಿವಾಸಿಗಳೆಂದು ಗುರುತಿಸಲಾಗಿದೆ. ಅಮವಾಸ್ಯೆ ಹಿನ್ನೆಲೆ ತಿಂತನಿಮೌನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮೃತಪಟ್ಟವರಲ್ಲಿ ಸರ್ಕಾರಿ ನೌಕರ ಶರಣಪ್ಪ, ಪುರಸಭೆ ಸದಸ್ಯ ಮಲ್ಲಿಕಾರ್ಜುನ್, ಮೂವರು ಮಹಿಳೆಯರು ಹಾಗೂ 12 ವರ್ಷದ ಮಗು ಸೇರಿದ್ದಾರೆ.
ಈ ದುರ್ಘಟನೆಯಿಂದ ಎರಡು ಜಿಲ್ಲೆಗಳಲ್ಲೂ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



ಬಸ್ನಲ್ಲಿದ್ದ ಹಲವರಿಗೆ ಗಂಭೀರ ಗಾಯ;
ಇನ್ನು, ಅಪಘಾತದ ತೀವ್ರತೆ ಬಸ್ ಗೂ ಬೆಂಕಿ ವ್ಯಾಪಿಸಿದ್ದು, ಅಲ್ಲಿದ್ದ ಸ್ಥಳೀಯರು ತಕ್ಷಣವೇ ಕಾರಿನಲ್ಲಿದ್ದವರ ರಕ್ಷಣೆಗೆ ಧಾವಿಸಿದ್ದು, ಕಾರಿನ ಜಖಂಗೊಂಡಿದ್ದ ಪರಿಣಾಮ ಕಾರಿನ ಡೋರ್ ತೆರೆಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ. ಬಳಿಕ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದಾದ ಬಳಿಕ ಕಾರಿನಲ್ಲಿ ಸುಟ್ಟುಕರಕಲಾದ ಮೃತದೇಹಗಳನ್ನು ಹೊರತೆಗೆದು ಅವರ ಗುರುತನ್ನು ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇನ್ನು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಒಂದು ಕ್ಷಣದ ಅಜಾಗರೂಕತೆ ಅಥವಾ ವಿಧಿಯ ಆಟ, ಕ್ಷಣಾರ್ಧದಲ್ಲಿ ಆರು ಜೀವಗಳನ್ನು ಕಸಿದುಕೊಂಡ ದಾರುಣ ಘಟನೆ ಇದು. ಕುಟುಂಬದೊಂದಿಗೆ ದೇವರ ದರ್ಶನಕ್ಕೆ ತೆರಳಿದ್ದವರು ಮನೆಗೆ ಮರಳುವ ದಾರಿಯಲ್ಲೇ ದುರಂತಕ್ಕೆ ಬಲಿಯಾದುದು ಹೃದಯವಿದ್ರಾವಕ. ರಸ್ತೆ ಸುರಕ್ಷತೆಯ ಮಹತ್ವವನ್ನು ಮರುಮರು ನೆನಪಿಸುವ ಈ ಘಟನೆ, ಒಂದು ತಪ್ಪು ನಿರ್ಧಾರವೇ ಎಷ್ಟು ಜೀವಗಳನ್ನು ಕತ್ತಲೆಗೆ ತಳ್ಳಬಹುದು ಎಂಬುದನ್ನು ಕಣ್ಣಿಗೆ ಕಟ್ಟುವಂತೆ ತೋರಿಸುತ್ತದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am