ಬ್ರೇಕಿಂಗ್ ನ್ಯೂಸ್
18-04-26 10:20 am HK News Staffer ಕರ್ನಾಟಕ
ಲಕ್ನೋ, ಎಪ್ರಿಲ್ 18: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದ್ವಿ ಪೌರತ್ವ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ಉತ್ತರ ಪ್ರದೇಶದ ರಾಯ್ಬರೇಲಿ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಗೆ ಎಫ್ಐಆರ್ ದಾಖಲಿಸುವಂತೆ ಅಲಹಾಬಾದ್ ಹೈಕೋರ್ಟ್ ಲಕ್ನೋ ಪೀಠವು ಆದೇಶ ಹೊರಡಿಸಿದೆ. ರಾಹುಲ್ ಗಾಂಧಿ ಅವರು ಪ್ರಸ್ತುತ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಸಂಸದರು. ರಾಹುಲ್ ವಿರುದ್ಧ ಕಾನೂನು ಕ್ರಮಕ್ಕೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನ ಪುರಸ್ಕರಿಸಿದ ಕೋರ್ಟ್ ಪ್ರಕರಣ ದಾಖಲಿಸಲು ಆದೇಶಿಸಿದೆ.
ಬೆಂಗಳೂರು ಮೂಲದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಎಂಬವರು ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆಂದು ಆರೋಪಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಮೊದಲು ಜನವರಿ 28 ರಂದು ಲಕ್ನೋದ ವಿಶೇಷ ನ್ಯಾಯಾಲಯವು ರಾಹುಲ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿದ್ದ ವಿಘ್ನೇಶ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ರಾಹುಲ್ ಗಾಂಧಿ ಅವರು ಭಾರತೀಯ ಪ್ರಜೆಯ ಜೊತೆಗೆ ಬ್ರಿಟಿಷ್ ಪ್ರಜೆಯೂ ಆಗಿದ್ದಾರೆ ಎಂಬುದನ್ನು ಸಾಬೀತುಪಡಿಸುವ ಬ್ರಿಟನ್ ಸರ್ಕಾರದ ಗೌಪ್ಯ ಇಮೇಲ್ಗಳು ಮತ್ತು ಪ್ರಮುಖ ದಾಖಲೆಗಳು ತಮ್ಮ ಬಳಿ ಇವೆ ಎಂದು ಅರ್ಜಿದಾರ ಶಿಶಿರ್ ಹೇಳಿಕೊಂಡಿದ್ದರು.
ಅಲ್ಲದೇ ಬ್ರಿಟಿಷ್ ಪೌರತ್ವ ಹೊಂದಿರುವುದರಿಂದ ರಾಹುಲ್ ಗಾಂಧಿ ಅವರು ಭಾರತದ ಚುನಾವಣೆಗಳಲ್ಲಿ ಸ್ಪರ್ಧಿಸಲು ಅನರ್ಹರಾಗಿದ್ದಾರೆ ಮತ್ತು ಲೋಕಸಭಾ ಸದಸ್ಯ ಹುದ್ದೆಯನ್ನು ಹೊಂದಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದರು. ಈ ಸಂಬಂಧ 2025ರ ಡಿಸೆಂಬರ್ 17 ರಂದು ರಾಹುಲ್ ಗಾಂಧಿ ವಿರುದ್ಧ ರಾಯ್ ಬರೇಲಿಯ ವಿಶೇಷ ಜನಪ್ರತಿನಿಧಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಬಳಿಕ ಹೈಕೋರ್ಟ್ ಪ್ರಕರಣವನ್ನ ಲಕ್ನೋ ಪೀಠಕ್ಕೆ ವರ್ಗಾಯಿಸಿತ್ತು. ಲಕ್ನೋ ಪೀಠ ಅರ್ಜಿಯನ್ನ ವಜಾಗೊಳಿಸಿದ ಬಳಿಕ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
16-05-26 10:24 pm
HK News Desk
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್ ಅಭ್ಯ...
16-05-26 11:46 am
ಮಾರುತಿ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕ ಗೋವು ಸಾಗಾಟ...
15-05-26 11:08 pm