ಬ್ರೇಕಿಂಗ್ ನ್ಯೂಸ್
18-04-26 10:20 am HK News Staffer ಕರ್ನಾಟಕ
ಲಕ್ನೋ, ಎಪ್ರಿಲ್ 18: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದ್ವಿ ಪೌರತ್ವ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ಉತ್ತರ ಪ್ರದೇಶದ ರಾಯ್ಬರೇಲಿ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಗೆ ಎಫ್ಐಆರ್ ದಾಖಲಿಸುವಂತೆ ಅಲಹಾಬಾದ್ ಹೈಕೋರ್ಟ್ ಲಕ್ನೋ ಪೀಠವು ಆದೇಶ ಹೊರಡಿಸಿದೆ. ರಾಹುಲ್ ಗಾಂಧಿ ಅವರು ಪ್ರಸ್ತುತ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಸಂಸದರು. ರಾಹುಲ್ ವಿರುದ್ಧ ಕಾನೂನು ಕ್ರಮಕ್ಕೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನ ಪುರಸ್ಕರಿಸಿದ ಕೋರ್ಟ್ ಪ್ರಕರಣ ದಾಖಲಿಸಲು ಆದೇಶಿಸಿದೆ.
ಬೆಂಗಳೂರು ಮೂಲದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಎಂಬವರು ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆಂದು ಆರೋಪಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಮೊದಲು ಜನವರಿ 28 ರಂದು ಲಕ್ನೋದ ವಿಶೇಷ ನ್ಯಾಯಾಲಯವು ರಾಹುಲ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿದ್ದ ವಿಘ್ನೇಶ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ರಾಹುಲ್ ಗಾಂಧಿ ಅವರು ಭಾರತೀಯ ಪ್ರಜೆಯ ಜೊತೆಗೆ ಬ್ರಿಟಿಷ್ ಪ್ರಜೆಯೂ ಆಗಿದ್ದಾರೆ ಎಂಬುದನ್ನು ಸಾಬೀತುಪಡಿಸುವ ಬ್ರಿಟನ್ ಸರ್ಕಾರದ ಗೌಪ್ಯ ಇಮೇಲ್ಗಳು ಮತ್ತು ಪ್ರಮುಖ ದಾಖಲೆಗಳು ತಮ್ಮ ಬಳಿ ಇವೆ ಎಂದು ಅರ್ಜಿದಾರ ಶಿಶಿರ್ ಹೇಳಿಕೊಂಡಿದ್ದರು.
ಅಲ್ಲದೇ ಬ್ರಿಟಿಷ್ ಪೌರತ್ವ ಹೊಂದಿರುವುದರಿಂದ ರಾಹುಲ್ ಗಾಂಧಿ ಅವರು ಭಾರತದ ಚುನಾವಣೆಗಳಲ್ಲಿ ಸ್ಪರ್ಧಿಸಲು ಅನರ್ಹರಾಗಿದ್ದಾರೆ ಮತ್ತು ಲೋಕಸಭಾ ಸದಸ್ಯ ಹುದ್ದೆಯನ್ನು ಹೊಂದಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದರು. ಈ ಸಂಬಂಧ 2025ರ ಡಿಸೆಂಬರ್ 17 ರಂದು ರಾಹುಲ್ ಗಾಂಧಿ ವಿರುದ್ಧ ರಾಯ್ ಬರೇಲಿಯ ವಿಶೇಷ ಜನಪ್ರತಿನಿಧಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಬಳಿಕ ಹೈಕೋರ್ಟ್ ಪ್ರಕರಣವನ್ನ ಲಕ್ನೋ ಪೀಠಕ್ಕೆ ವರ್ಗಾಯಿಸಿತ್ತು. ಲಕ್ನೋ ಪೀಠ ಅರ್ಜಿಯನ್ನ ವಜಾಗೊಳಿಸಿದ ಬಳಿಕ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm