ಬ್ರೇಕಿಂಗ್ ನ್ಯೂಸ್
18-04-26 10:20 am HK News Staffer ಕರ್ನಾಟಕ
ಲಕ್ನೋ, ಎಪ್ರಿಲ್ 18: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದ್ವಿ ಪೌರತ್ವ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ಉತ್ತರ ಪ್ರದೇಶದ ರಾಯ್ಬರೇಲಿ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಗೆ ಎಫ್ಐಆರ್ ದಾಖಲಿಸುವಂತೆ ಅಲಹಾಬಾದ್ ಹೈಕೋರ್ಟ್ ಲಕ್ನೋ ಪೀಠವು ಆದೇಶ ಹೊರಡಿಸಿದೆ. ರಾಹುಲ್ ಗಾಂಧಿ ಅವರು ಪ್ರಸ್ತುತ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಸಂಸದರು. ರಾಹುಲ್ ವಿರುದ್ಧ ಕಾನೂನು ಕ್ರಮಕ್ಕೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನ ಪುರಸ್ಕರಿಸಿದ ಕೋರ್ಟ್ ಪ್ರಕರಣ ದಾಖಲಿಸಲು ಆದೇಶಿಸಿದೆ.
ಬೆಂಗಳೂರು ಮೂಲದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಎಂಬವರು ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆಂದು ಆರೋಪಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಮೊದಲು ಜನವರಿ 28 ರಂದು ಲಕ್ನೋದ ವಿಶೇಷ ನ್ಯಾಯಾಲಯವು ರಾಹುಲ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿದ್ದ ವಿಘ್ನೇಶ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ರಾಹುಲ್ ಗಾಂಧಿ ಅವರು ಭಾರತೀಯ ಪ್ರಜೆಯ ಜೊತೆಗೆ ಬ್ರಿಟಿಷ್ ಪ್ರಜೆಯೂ ಆಗಿದ್ದಾರೆ ಎಂಬುದನ್ನು ಸಾಬೀತುಪಡಿಸುವ ಬ್ರಿಟನ್ ಸರ್ಕಾರದ ಗೌಪ್ಯ ಇಮೇಲ್ಗಳು ಮತ್ತು ಪ್ರಮುಖ ದಾಖಲೆಗಳು ತಮ್ಮ ಬಳಿ ಇವೆ ಎಂದು ಅರ್ಜಿದಾರ ಶಿಶಿರ್ ಹೇಳಿಕೊಂಡಿದ್ದರು.
ಅಲ್ಲದೇ ಬ್ರಿಟಿಷ್ ಪೌರತ್ವ ಹೊಂದಿರುವುದರಿಂದ ರಾಹುಲ್ ಗಾಂಧಿ ಅವರು ಭಾರತದ ಚುನಾವಣೆಗಳಲ್ಲಿ ಸ್ಪರ್ಧಿಸಲು ಅನರ್ಹರಾಗಿದ್ದಾರೆ ಮತ್ತು ಲೋಕಸಭಾ ಸದಸ್ಯ ಹುದ್ದೆಯನ್ನು ಹೊಂದಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದರು. ಈ ಸಂಬಂಧ 2025ರ ಡಿಸೆಂಬರ್ 17 ರಂದು ರಾಹುಲ್ ಗಾಂಧಿ ವಿರುದ್ಧ ರಾಯ್ ಬರೇಲಿಯ ವಿಶೇಷ ಜನಪ್ರತಿನಿಧಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಬಳಿಕ ಹೈಕೋರ್ಟ್ ಪ್ರಕರಣವನ್ನ ಲಕ್ನೋ ಪೀಠಕ್ಕೆ ವರ್ಗಾಯಿಸಿತ್ತು. ಲಕ್ನೋ ಪೀಠ ಅರ್ಜಿಯನ್ನ ವಜಾಗೊಳಿಸಿದ ಬಳಿಕ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm