ಬ್ರೇಕಿಂಗ್ ನ್ಯೂಸ್
04-01-21 05:35 pm Headline Karnataka News Network ಕರ್ನಾಟಕ
ಮೈಸೂರು, ಜ.4: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಬಳಿಕ ದೇಶದ ಸಾಲದ ಮೊತ್ತ ಹೆಚ್ಚುತ್ತಿದೆ. ಈ ಹಿಂದೆ ಸಾಲದ ಬಗ್ಗೆ ಮಾತನಾಡುತ್ತಿದ್ದವರು ಈಗ ಮತ್ತೆ ದುಪ್ಪಟ್ಟು ಸಾಲ ಮಾಡಿದ್ದು ಯಾರಿಗೂ ಗೊತ್ತೇ ಆಗಿಲ್ಲ. ದೇಶವನ್ನು ಬಿಜೆಪಿ ಸರಕಾರ ಸಾಲದ ಕೂಪಕ್ಕೆ ತಳ್ಳುತ್ತಿದೆ. ಕಳೆದ ಆರು ವರ್ಷಗಳಲ್ಲಿ ಭಾರತ ಸರಕಾರ ಮತ್ತೆ 53 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಲಕ್ಷ್ಮಣ್, ಜೂನ್ 2014ರಲ್ಲಿ ನಮ್ಮ ದೇಶದ ಒಟ್ಟು ಸಾಲ 53 ಲಕ್ಷ ಕೋಟಿ ರೂ. ಇತ್ತು. ಆದರೆ, 2020ರಲ್ಲಿ ಭಾರತ ಸರಕಾರದ ಸಾಲ 107 ಲಕ್ಷ ಕೋಟಿ ರೂ. ಆಗಿದೆ. ಬಿಜೆಪಿ ಸರಕಾರ ಬಂದ ಬಳಿಕ ಮತ್ತೆ 54 ಲಕ್ಷ ಕೋಟಿ ರೂ. ಸಾಲ ಹೆಚ್ಚಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಐದು ವರ್ಷದಲ್ಲಿ 90 ಸಾವಿರ ಕೋಟಿ ಸಾಲ ಮಾಡಿದ್ದನ್ನು ಬಿಜೆಪಿಯವರು ಹೇಳಿಕೊಂಡು ತಿರುಗಾಡಿದ್ದರು. ಈಗ ಬಿಜೆಪಿ ಸರಕಾರ ಬಂದು ಎರಡು ವರ್ಷದಲ್ಲಿ ಸಿಎಂ ಯಡಿಯೂರಪ್ಪ 1.2 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಇಷ್ಟೊಂದು ಸಾಲ ಮಾಡಿದ್ದನ್ನು ಬಿಜೆಪಿಯವರು ಈಗ ಯಾಕೆ ಹೇಳಿಕೊಳ್ಳುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.
ಇನ್ನು ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಬಂದಿರುವ ಅರುಣ್ ಸಿಂಗ್ ಅವರನ್ನು ಸಿಎಂ ಯಡಿಯೂರಪ್ಪ ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ. ಅವರ ರಿಮೋಟ್ ಕಂಟ್ರೋಲ್ ಯಡಿಯೂರಪ್ಪ ಕೈಯಲ್ಲೇ ಇದೆ. ಅರುಣ್ ಸಿಂಗ್ ಬರೋದು, ಹೋಗೋದು ಅಷ್ಟೇ ಎಂದು ವ್ಯಂಗ್ಯವಾಡಿದರು.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm