ಬ್ರೇಕಿಂಗ್ ನ್ಯೂಸ್
24-04-26 02:35 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 24: ರಾಜ್ಯ ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತ ನಾಯಕರ ಮೇಲಿನ ಕ್ರಮದ ವಿಚಾರದಲ್ಲಿ ಉಂಟಾಗಿರುವ ಆಂತರಿಕ ಬಿಕ್ಕಟ್ಟು ತೀವ್ರಗೊಂಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯ ನಂತರ ಪಕ್ಷದೊಳಗೆ ಭಿನ್ನಾಭಿಪ್ರಾಯ ಹೆಚ್ಚಿದ್ದು, ಇಬ್ಬರು ಮುಸ್ಲಿಂ ನಾಯಕರ ವಿರುದ್ಧ ಕೈಗೊಂಡ ಶಿಸ್ತಿನ ಕ್ರಮ ಅಸಮಾಧಾನಕ್ಕೆ ಕಾರಣವಾಗಿದೆ. ಫಲಿತಾಂಶ ಬರುವುದಕ್ಕು ಮುನ್ನ ತೆಗೆದುಕೊಂಡ ಈ ಕ್ರಮಕ್ಕೆ ಪಕ್ಷದ ಕೆಲವು ಪ್ರಮುಖ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಜಮೀರ್ ಅಹ್ಮದ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, “ಈ ರೀತಿಯ ಕ್ರಮಗಳು ಪಕ್ಷದ ಅಲ್ಪಸಂಖ್ಯಾತ ಬೆಂಬಲದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ” ಎಂದು ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ, ಜಮೀರ್ ಅವರು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದು, ಪಕ್ಷದ ಒಳಜಗಳವನ್ನು ನಿಯಂತ್ರಿಸಲು ನಡೆದ ಪ್ರಯತ್ನವೋ, ಪಕ್ಷದ ಕ್ರಮದ ವಿಚಾರದಲ್ಲಿ ನಡೆಸಿರುವ ಸಮಾಲೋಚನೆಯೋ ಎಂಬ ಬಗ್ಗೆ ಚರ್ಚೆ ನಡೆದಿದೆ.
ಇತ್ತೀಚೆಗೆ, ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಸತೀಶ್ ಜಾರಕಿಹೊಳಿ ಡಿಸಿಎಂ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ತುರ್ತು ಕ್ರಮ ಕೈಗೊಳ್ಳುವ ಬದಲು ಶೋಕಾಸ್ ನೋಟಿಸ್ ನೀಡಿ ಕ್ರಮಕ್ಕೆ ಮುಂದಾಗಬೇಕಿತ್ತು ಎಂದು ಜಾರಕಿಹೊಳಿ, ಡಿಕೆಶಿಗೆ ಸಲಹೆ ಮಾಡಿದ್ದರು. ಇದರ ಬೆನ್ನಲ್ಲೇ ಜಮೀರ್ ಅಹ್ಮದ್ ಮತ್ತು ಜಾರಕಿಹೊಳಿ ಭೇಟಿಯಾಗಿ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚಿಸಿದ್ದಾರೆ. ಉಪ ಚುನಾವಣೆಯ ವೇಳೆ ನಡೆದ ಘಟನೆಗಳ ಹಿನ್ನೆಲೆ, ಆರೋಪಗಳು, ಶಿಸ್ತಿನ ಕ್ರಮ ಕೈಗೊಳ್ಳುವ ಅಗತ್ಯತೆ ಮತ್ತು ಅದರ ಪರಿಣಾಮಗಳು ಸೇರಿದಂತೆ ಹಲವು ಅಂಶಗಳನ್ನು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಆದರೆ, ಪಕ್ಷದ ಕೆಲ ಹಿರಿಯ ನಾಯಕರು ಈ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ವಿಶೇಷವಾಗಿ ಅಲ್ಪಸಂಖ್ಯಾತರ ಬೆಂಬಲವೇ ಪ್ರಮುಖವಾಗಿರುವ ಕ್ಷೇತ್ರಗಳಲ್ಲಿ ಈ ರೀತಿಯ ಕ್ರಮಗಳನ್ನು ಎಚ್ಚರಿಕೆಯಿಂದ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. ಇಂತಹ ಬೆಳವಣಿಗೆಗಳಿಂದ ಕಾಂಗ್ರೆಸ್ ಪಕ್ಷದೊಳಗೆ ಎರಡು ವಿಭಿನ್ನ ಧೋರಣೆಗಳು ಸ್ಪಷ್ಟವಾಗುತ್ತಿವೆ. ಒಂದು ವಲಯ ಶಿಸ್ತಿನ ಕಠಿಣ ಅನುಷ್ಠಾನವನ್ನು ಒತ್ತಾಯಿಸುತ್ತಿದ್ದರೆ, ಇನ್ನೊಂದು ವಲಯ ಸಮಾಲೋಚನೆ ಮತ್ತು ರಾಜಕೀಯ ಸಂವೇದನಾಶೀಲತೆಯನ್ನು ಮುಖ್ಯವೆಂದು ಪರಿಗಣಿಸುತ್ತಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am