ಬ್ರೇಕಿಂಗ್ ನ್ಯೂಸ್
24-04-26 10:52 pm HK News Staffer ಕರ್ನಾಟಕ
ಕಾರವಾರ, ಏಪ್ರಿಲ್ 24: ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಫೇಲ್ ಆಗಿದ್ದ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಗುರುವಾರ ಪ್ರಕಟವಾದ ಅಧಿಕೃತ ಫಲಿತಾಂಶದಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ‘ಗೈರು’ ಎಂದು ನಮೂದಾಗಿದ್ದ ಕಾರಣ ಲೀಸಾ ಫೇಲ್ ಎಂದು ತೋರಿಸಲಾಗಿತ್ತು. ಆದರೆ ಇಂದು ಹೊರಬಂದ ಮತ್ತೊಂದು ಫಲಿತಾಂಶದಲ್ಲಿ ಆಕೆ ಶಾಲೆಯ ಟಾಪರ್ ಎಂದು ಹೇಳಲಾಗುತ್ತಿದೆ.
ಶಿರಸಿಯ ಇಂದಿರಾ ನಗರದ ಯೂನಿಯನ್ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಲೀಸಾ ಖಾನಮ್, ಎಲ್ಲಾ ಪರೀಕ್ಷೆಗಳನ್ನು ಬರೆದಿದ್ದರೂ ಪರೀಕ್ಷಾ ಪ್ರಾಧಿಕಾರದ ತಪ್ಪಿನಿಂದ ಸಮಾಜ ವಿಜ್ಞಾನ ವಿಷಯದಲ್ಲಿ ಗೈರು ಎಂದು ದಾಖಲಾಗಿತ್ತು. ಇದರ ಪರಿಣಾಮವಾಗಿ 84.16% ಅಂಕ ಗಳಿಸಿದ್ದರೂ ಕೂಡ ಆಕೆಯ ಫಲಿತಾಂಶ ಫೇಲ್ ಎಂದು ಪ್ರಕಟವಾಗಿತ್ತು.
ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮರುಪರಿಶೀಲನೆ ನಡೆಸಲಾಗಿದ್ದು, ಈಗ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಅದೇ ವಿಷಯದಲ್ಲಿ ಲೀಸಾಗೆ 97 ಅಂಕಗಳು ಬಂದಿದ್ದು, ಶಾಲೆಯ ಟಾಪರ್ ಆಗಿ ಹೊರಹೊಮ್ಮಿದ್ದಾಳೆ ಎನ್ನಲಾಗಿದೆ.
ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿರಸಿ ಡಿಡಿಪಿಐ, ಪ್ರಸ್ತುತ ಹರಿದಾಡುತ್ತಿರುವ ಫಲಿತಾಂಶ ಅಧಿಕೃತ ಪ್ರತಿಯಲ್ಲ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೇಪರ್ ಮಿಸ್ ಆಗಿರುವುದು ನಿಜವಾಗಿದ್ದು, ಅದರ ಪರಿಶೀಲನೆ ಇನ್ನೂ ಮುಂದುವರಿದಿದೆ. ಅಂತಿಮ ಅಧಿಕೃತ ಫಲಿತಾಂಶ ಪ್ರಕಟಿಸಲು ಇನ್ನೂ ಎರಡು ದಿನಗಳ ಕಾಲಾವಕಾಶ ಬೇಕು ಎಂದು ಹೇಳಿದ್ದಾರೆ.
ಈ ಬೆಳವಣಿಗೆಯಿಂದಾಗಿ ಪ್ರತಿಭಾವಂತ ಅಂಧ ವಿದ್ಯಾರ್ಥಿನಿಯ ಭವಿಷ್ಯ ಸದ್ಯ ಅತಂತ್ರ ಸ್ಥಿತಿಯಲ್ಲಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸಕ್ಕೂ ಪ್ರಶ್ನೆ ಎದ್ದಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm