ಬ್ರೇಕಿಂಗ್ ನ್ಯೂಸ್
24-04-26 10:52 pm HK News Staffer ಕರ್ನಾಟಕ
ಕಾರವಾರ, ಏಪ್ರಿಲ್ 24: ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಫೇಲ್ ಆಗಿದ್ದ ಅಂಧ ವಿದ್ಯಾರ್ಥಿನಿ ಲೀಸಾ ಖಾನಮ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಗುರುವಾರ ಪ್ರಕಟವಾದ ಅಧಿಕೃತ ಫಲಿತಾಂಶದಲ್ಲಿ ಸಮಾಜ ವಿಜ್ಞಾನ ವಿಷಯದಲ್ಲಿ ‘ಗೈರು’ ಎಂದು ನಮೂದಾಗಿದ್ದ ಕಾರಣ ಲೀಸಾ ಫೇಲ್ ಎಂದು ತೋರಿಸಲಾಗಿತ್ತು. ಆದರೆ ಇಂದು ಹೊರಬಂದ ಮತ್ತೊಂದು ಫಲಿತಾಂಶದಲ್ಲಿ ಆಕೆ ಶಾಲೆಯ ಟಾಪರ್ ಎಂದು ಹೇಳಲಾಗುತ್ತಿದೆ.
ಶಿರಸಿಯ ಇಂದಿರಾ ನಗರದ ಯೂನಿಯನ್ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಲೀಸಾ ಖಾನಮ್, ಎಲ್ಲಾ ಪರೀಕ್ಷೆಗಳನ್ನು ಬರೆದಿದ್ದರೂ ಪರೀಕ್ಷಾ ಪ್ರಾಧಿಕಾರದ ತಪ್ಪಿನಿಂದ ಸಮಾಜ ವಿಜ್ಞಾನ ವಿಷಯದಲ್ಲಿ ಗೈರು ಎಂದು ದಾಖಲಾಗಿತ್ತು. ಇದರ ಪರಿಣಾಮವಾಗಿ 84.16% ಅಂಕ ಗಳಿಸಿದ್ದರೂ ಕೂಡ ಆಕೆಯ ಫಲಿತಾಂಶ ಫೇಲ್ ಎಂದು ಪ್ರಕಟವಾಗಿತ್ತು.
ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ ಮರುಪರಿಶೀಲನೆ ನಡೆಸಲಾಗಿದ್ದು, ಈಗ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಅದೇ ವಿಷಯದಲ್ಲಿ ಲೀಸಾಗೆ 97 ಅಂಕಗಳು ಬಂದಿದ್ದು, ಶಾಲೆಯ ಟಾಪರ್ ಆಗಿ ಹೊರಹೊಮ್ಮಿದ್ದಾಳೆ ಎನ್ನಲಾಗಿದೆ.
ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿರಸಿ ಡಿಡಿಪಿಐ, ಪ್ರಸ್ತುತ ಹರಿದಾಡುತ್ತಿರುವ ಫಲಿತಾಂಶ ಅಧಿಕೃತ ಪ್ರತಿಯಲ್ಲ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೇಪರ್ ಮಿಸ್ ಆಗಿರುವುದು ನಿಜವಾಗಿದ್ದು, ಅದರ ಪರಿಶೀಲನೆ ಇನ್ನೂ ಮುಂದುವರಿದಿದೆ. ಅಂತಿಮ ಅಧಿಕೃತ ಫಲಿತಾಂಶ ಪ್ರಕಟಿಸಲು ಇನ್ನೂ ಎರಡು ದಿನಗಳ ಕಾಲಾವಕಾಶ ಬೇಕು ಎಂದು ಹೇಳಿದ್ದಾರೆ.
ಈ ಬೆಳವಣಿಗೆಯಿಂದಾಗಿ ಪ್ರತಿಭಾವಂತ ಅಂಧ ವಿದ್ಯಾರ್ಥಿನಿಯ ಭವಿಷ್ಯ ಸದ್ಯ ಅತಂತ್ರ ಸ್ಥಿತಿಯಲ್ಲಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸಕ್ಕೂ ಪ್ರಶ್ನೆ ಎದ್ದಿದೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm