ಬ್ರೇಕಿಂಗ್ ನ್ಯೂಸ್
25-04-26 10:56 pm HK Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 25: ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದು ಪರಿಹಾರ ನೀಡಬೇಕೆಂದು ಬಸ್ ಸಿಬಂದಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಜಿಗಣಿ ಡಿಪೋದಲ್ಲಿ ನಡೆದಿದೆ.
32 ವರ್ಷದ ರಮೇಶ್ ಸಾವನ್ನಪ್ಪಿದ ಬಿಎಂಟಿಸಿ ಬಸ್ ಚಾಲಕನಾಗಿದ್ದು ಎದೆ ನೋವು ಬರುತ್ತಿದ್ದಾಗಲೇ ಬಸ್ಸನ್ನು ನಿಲ್ಲಿಸಿ ಕುಸಿದು ಬಿದ್ದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಬಸ್ ಜಿಗಣಿಯಿಂದ ಬೊಮ್ಮಸಂದ್ರಕ್ಕೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಘಟನೆಯಿಂದ ಬೇಸತ್ತ ಬಿಎಂಟಿಸಿ ಜಿಗಣಿ ಡಿಪೋದ ಸಹೋದ್ಯೋಗಿಗಳು ಸಂಜೆಯಾಗುತ್ತಲೇ ಬಸ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ಮೃತನ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ರಾತ್ರಿ ವರೆಗೂ ಧರಣಿ ನಡೆಸಿದ್ದಾರೆ. ಈ ಹಿಂದೆ ಒಬ್ಬ ಚಾಲಕ ಇದೇ ರೀತಿ ಮೃತಪಟ್ಟಿದ್ದು ಬಿಎಂಟಿಸಿ ಪರಿಹಾರ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಪೋ ಮ್ಯಾನೇಜರ್ ಕೌಸರ್ ಬಾನು ಮೇಲೆ ಆಕ್ರೋಶ ತಿರುಗಿದ್ದು ಕಳೆದ ಬಾರಿ ಇದೇ ರೀತಿ ಮಲ್ಲಿಕಾರ್ಜುನ ಎಂಬಾತ ಸಾವನ್ನಪ್ಪಿದ್ದರು. ಆದರೆ ಅವರ ಕುಟುಂಬಕ್ಕೆ ಕನಿಷ್ಠ ಇನ್ಶುರೆನ್ಸ್ ಸಹ ಬಂದಿಲ್ಲ. ಇದೀಗ ರಮೇಶ್ ಕುಟುಂಬಕ್ಕು ಅದೇ ರೀತಿ ಅನ್ಯಾಯವಾಗುವ ಸಾಧ್ಯತೆ ಇದೆ. ಕೂಡಲೇ ಪರಿಹಾರ ಘೋಷಣೆ ಮಾಡಿ ಅವರಿಗೆ ನ್ಯಾಯ ಕೊಡಿಸುವಂತೆ ಸಿಬಂದಿ ಒತ್ತಾಯಿಸಿದ್ದಾರೆ. ಆದರೆ ಪ್ರತಿಭಟನೆ ನಡೆಸಿ ನ್ಯಾಯ ಕೇಳಿದ್ದಕ್ಕೆ ಸಿಬ್ಬಂದಿಗೆ ಗೇಸ್ ಪಾಸ್ ನೀಡಲು ಕೌಸರ್ ಬಾನು ಪ್ಲಾನ್ ಮಾಡಿದ್ದಾರೆಂಬ ಭಾವನೆಯಲ್ಲಿ ರಾತ್ರಿ ವರೆಗೂ ಧಿಕ್ಕಾರ ಕೂಗುತ್ತಾ ಧರಣಿ ನಡೆಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm