ಬ್ರೇಕಿಂಗ್ ನ್ಯೂಸ್
25-04-26 10:56 pm HK Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 25: ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದು ಪರಿಹಾರ ನೀಡಬೇಕೆಂದು ಬಸ್ ಸಿಬಂದಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಜಿಗಣಿ ಡಿಪೋದಲ್ಲಿ ನಡೆದಿದೆ.
32 ವರ್ಷದ ರಮೇಶ್ ಸಾವನ್ನಪ್ಪಿದ ಬಿಎಂಟಿಸಿ ಬಸ್ ಚಾಲಕನಾಗಿದ್ದು ಎದೆ ನೋವು ಬರುತ್ತಿದ್ದಾಗಲೇ ಬಸ್ಸನ್ನು ನಿಲ್ಲಿಸಿ ಕುಸಿದು ಬಿದ್ದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಬಸ್ ಜಿಗಣಿಯಿಂದ ಬೊಮ್ಮಸಂದ್ರಕ್ಕೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಘಟನೆಯಿಂದ ಬೇಸತ್ತ ಬಿಎಂಟಿಸಿ ಜಿಗಣಿ ಡಿಪೋದ ಸಹೋದ್ಯೋಗಿಗಳು ಸಂಜೆಯಾಗುತ್ತಲೇ ಬಸ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ಮೃತನ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ರಾತ್ರಿ ವರೆಗೂ ಧರಣಿ ನಡೆಸಿದ್ದಾರೆ. ಈ ಹಿಂದೆ ಒಬ್ಬ ಚಾಲಕ ಇದೇ ರೀತಿ ಮೃತಪಟ್ಟಿದ್ದು ಬಿಎಂಟಿಸಿ ಪರಿಹಾರ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಪೋ ಮ್ಯಾನೇಜರ್ ಕೌಸರ್ ಬಾನು ಮೇಲೆ ಆಕ್ರೋಶ ತಿರುಗಿದ್ದು ಕಳೆದ ಬಾರಿ ಇದೇ ರೀತಿ ಮಲ್ಲಿಕಾರ್ಜುನ ಎಂಬಾತ ಸಾವನ್ನಪ್ಪಿದ್ದರು. ಆದರೆ ಅವರ ಕುಟುಂಬಕ್ಕೆ ಕನಿಷ್ಠ ಇನ್ಶುರೆನ್ಸ್ ಸಹ ಬಂದಿಲ್ಲ. ಇದೀಗ ರಮೇಶ್ ಕುಟುಂಬಕ್ಕು ಅದೇ ರೀತಿ ಅನ್ಯಾಯವಾಗುವ ಸಾಧ್ಯತೆ ಇದೆ. ಕೂಡಲೇ ಪರಿಹಾರ ಘೋಷಣೆ ಮಾಡಿ ಅವರಿಗೆ ನ್ಯಾಯ ಕೊಡಿಸುವಂತೆ ಸಿಬಂದಿ ಒತ್ತಾಯಿಸಿದ್ದಾರೆ. ಆದರೆ ಪ್ರತಿಭಟನೆ ನಡೆಸಿ ನ್ಯಾಯ ಕೇಳಿದ್ದಕ್ಕೆ ಸಿಬ್ಬಂದಿಗೆ ಗೇಸ್ ಪಾಸ್ ನೀಡಲು ಕೌಸರ್ ಬಾನು ಪ್ಲಾನ್ ಮಾಡಿದ್ದಾರೆಂಬ ಭಾವನೆಯಲ್ಲಿ ರಾತ್ರಿ ವರೆಗೂ ಧಿಕ್ಕಾರ ಕೂಗುತ್ತಾ ಧರಣಿ ನಡೆಸಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am