ಬ್ರೇಕಿಂಗ್ ನ್ಯೂಸ್
25-04-26 10:56 pm HK Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 25: ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದು ಪರಿಹಾರ ನೀಡಬೇಕೆಂದು ಬಸ್ ಸಿಬಂದಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಜಿಗಣಿ ಡಿಪೋದಲ್ಲಿ ನಡೆದಿದೆ.
32 ವರ್ಷದ ರಮೇಶ್ ಸಾವನ್ನಪ್ಪಿದ ಬಿಎಂಟಿಸಿ ಬಸ್ ಚಾಲಕನಾಗಿದ್ದು ಎದೆ ನೋವು ಬರುತ್ತಿದ್ದಾಗಲೇ ಬಸ್ಸನ್ನು ನಿಲ್ಲಿಸಿ ಕುಸಿದು ಬಿದ್ದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಬಸ್ ಜಿಗಣಿಯಿಂದ ಬೊಮ್ಮಸಂದ್ರಕ್ಕೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಘಟನೆಯಿಂದ ಬೇಸತ್ತ ಬಿಎಂಟಿಸಿ ಜಿಗಣಿ ಡಿಪೋದ ಸಹೋದ್ಯೋಗಿಗಳು ಸಂಜೆಯಾಗುತ್ತಲೇ ಬಸ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ಮೃತನ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ರಾತ್ರಿ ವರೆಗೂ ಧರಣಿ ನಡೆಸಿದ್ದಾರೆ. ಈ ಹಿಂದೆ ಒಬ್ಬ ಚಾಲಕ ಇದೇ ರೀತಿ ಮೃತಪಟ್ಟಿದ್ದು ಬಿಎಂಟಿಸಿ ಪರಿಹಾರ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಪೋ ಮ್ಯಾನೇಜರ್ ಕೌಸರ್ ಬಾನು ಮೇಲೆ ಆಕ್ರೋಶ ತಿರುಗಿದ್ದು ಕಳೆದ ಬಾರಿ ಇದೇ ರೀತಿ ಮಲ್ಲಿಕಾರ್ಜುನ ಎಂಬಾತ ಸಾವನ್ನಪ್ಪಿದ್ದರು. ಆದರೆ ಅವರ ಕುಟುಂಬಕ್ಕೆ ಕನಿಷ್ಠ ಇನ್ಶುರೆನ್ಸ್ ಸಹ ಬಂದಿಲ್ಲ. ಇದೀಗ ರಮೇಶ್ ಕುಟುಂಬಕ್ಕು ಅದೇ ರೀತಿ ಅನ್ಯಾಯವಾಗುವ ಸಾಧ್ಯತೆ ಇದೆ. ಕೂಡಲೇ ಪರಿಹಾರ ಘೋಷಣೆ ಮಾಡಿ ಅವರಿಗೆ ನ್ಯಾಯ ಕೊಡಿಸುವಂತೆ ಸಿಬಂದಿ ಒತ್ತಾಯಿಸಿದ್ದಾರೆ. ಆದರೆ ಪ್ರತಿಭಟನೆ ನಡೆಸಿ ನ್ಯಾಯ ಕೇಳಿದ್ದಕ್ಕೆ ಸಿಬ್ಬಂದಿಗೆ ಗೇಸ್ ಪಾಸ್ ನೀಡಲು ಕೌಸರ್ ಬಾನು ಪ್ಲಾನ್ ಮಾಡಿದ್ದಾರೆಂಬ ಭಾವನೆಯಲ್ಲಿ ರಾತ್ರಿ ವರೆಗೂ ಧಿಕ್ಕಾರ ಕೂಗುತ್ತಾ ಧರಣಿ ನಡೆಸಿದ್ದಾರೆ.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm