ಬ್ರೇಕಿಂಗ್ ನ್ಯೂಸ್
25-04-26 10:56 pm HK Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 25: ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದು ಪರಿಹಾರ ನೀಡಬೇಕೆಂದು ಬಸ್ ಸಿಬಂದಿ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಜಿಗಣಿ ಡಿಪೋದಲ್ಲಿ ನಡೆದಿದೆ.
32 ವರ್ಷದ ರಮೇಶ್ ಸಾವನ್ನಪ್ಪಿದ ಬಿಎಂಟಿಸಿ ಬಸ್ ಚಾಲಕನಾಗಿದ್ದು ಎದೆ ನೋವು ಬರುತ್ತಿದ್ದಾಗಲೇ ಬಸ್ಸನ್ನು ನಿಲ್ಲಿಸಿ ಕುಸಿದು ಬಿದ್ದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಬಸ್ ಜಿಗಣಿಯಿಂದ ಬೊಮ್ಮಸಂದ್ರಕ್ಕೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಘಟನೆಯಿಂದ ಬೇಸತ್ತ ಬಿಎಂಟಿಸಿ ಜಿಗಣಿ ಡಿಪೋದ ಸಹೋದ್ಯೋಗಿಗಳು ಸಂಜೆಯಾಗುತ್ತಲೇ ಬಸ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ಮೃತನ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ರಾತ್ರಿ ವರೆಗೂ ಧರಣಿ ನಡೆಸಿದ್ದಾರೆ. ಈ ಹಿಂದೆ ಒಬ್ಬ ಚಾಲಕ ಇದೇ ರೀತಿ ಮೃತಪಟ್ಟಿದ್ದು ಬಿಎಂಟಿಸಿ ಪರಿಹಾರ ಕೊಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಪೋ ಮ್ಯಾನೇಜರ್ ಕೌಸರ್ ಬಾನು ಮೇಲೆ ಆಕ್ರೋಶ ತಿರುಗಿದ್ದು ಕಳೆದ ಬಾರಿ ಇದೇ ರೀತಿ ಮಲ್ಲಿಕಾರ್ಜುನ ಎಂಬಾತ ಸಾವನ್ನಪ್ಪಿದ್ದರು. ಆದರೆ ಅವರ ಕುಟುಂಬಕ್ಕೆ ಕನಿಷ್ಠ ಇನ್ಶುರೆನ್ಸ್ ಸಹ ಬಂದಿಲ್ಲ. ಇದೀಗ ರಮೇಶ್ ಕುಟುಂಬಕ್ಕು ಅದೇ ರೀತಿ ಅನ್ಯಾಯವಾಗುವ ಸಾಧ್ಯತೆ ಇದೆ. ಕೂಡಲೇ ಪರಿಹಾರ ಘೋಷಣೆ ಮಾಡಿ ಅವರಿಗೆ ನ್ಯಾಯ ಕೊಡಿಸುವಂತೆ ಸಿಬಂದಿ ಒತ್ತಾಯಿಸಿದ್ದಾರೆ. ಆದರೆ ಪ್ರತಿಭಟನೆ ನಡೆಸಿ ನ್ಯಾಯ ಕೇಳಿದ್ದಕ್ಕೆ ಸಿಬ್ಬಂದಿಗೆ ಗೇಸ್ ಪಾಸ್ ನೀಡಲು ಕೌಸರ್ ಬಾನು ಪ್ಲಾನ್ ಮಾಡಿದ್ದಾರೆಂಬ ಭಾವನೆಯಲ್ಲಿ ರಾತ್ರಿ ವರೆಗೂ ಧಿಕ್ಕಾರ ಕೂಗುತ್ತಾ ಧರಣಿ ನಡೆಸಿದ್ದಾರೆ.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm