ಬ್ರೇಕಿಂಗ್ ನ್ಯೂಸ್
26-04-26 08:05 pm HK News Staffer ಕರ್ನಾಟಕ
ಹುಬ್ಬಳ್ಳಿ, ಎಪ್ರಿಲ್ 26: ನಾಯಕತ್ವ ಬದಲಾವಣೆ ಪ್ರಸ್ತಾಪ ಇಲ್ಲ. ಹಿರಿಯ ಶಾಸಕರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ. ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆಯಾಗುವ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರು. ಅವರು ತಮ್ಮ ಮಂತ್ರಿ ಮಂಡಲದ ಸಭೆ ಮತ್ತು ಶಾಸಕರ ಸಭೆ ಮಾಡುತ್ತಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ನಾಯಕತ್ವ ಬದಲಾವಣೆ ಮಾತೇ ಇಲ್ಲ. ಈ ಕುರಿತು ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ. ವಿವಿಧ ರಾಜ್ಯಗಳು ಹಾಗೂ ರಾಜ್ಯದಲ್ಲಿನ ಉಪ ಚುನಾವಣೆ ಫಲಿತಾಂಶ ಮೇ 4ರಂದು ಬರಲಿದ್ದು, ನಂತರ ಸಂಪುಟ ವಿಸ್ತರಣೆ ವಿಷಯ ಚರ್ಚೆಗೆ ಬರಲಿದೆ.
ಈಗಿರುವ ಶೇ.50 ಸಚಿವರನ್ನು ಪಕ್ಷದ ಕೆಲಸಕ್ಕೆ ನಿಯೋಜನೆ ಮಾಡಬೇಕು. ಉಳಿದವರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದೇವೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕ್ರಮಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಒತ್ತಾಯಿಸಿದ್ದಾರೆ. ಇದು ನಾನು ಸೇರಿದಂತೆ ಪ್ರತಿಯೊಬ್ಬ ಕಾರ್ಯಕರ್ತನ ಒತ್ತಾಯವಾಗಿದೆ ಎಂದು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm