ಬ್ರೇಕಿಂಗ್ ನ್ಯೂಸ್
11-08-20 05:54 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 11: ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಘಟನೆ ನಡೆದಿದ್ದು ಉದ್ರಿಕ್ತರ ಗುಂಪು ಶಾಸಕರ ಮನೆ ಹಾಗೂ ಪೊಲೀಸ್ ವಾಹನಗಳಿಗೂ ದಾಳಿ ನಡೆಸಿದ್ದಾರೆ.
ಪುಲಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಶಾಸಕರ ಮನೆಯ ಮತ್ತು ಠಾಣೆ ಎದುರು ಜನರು ಜಮಾಯಿಸಿದ್ದು, ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಠಾಣೆಯ ಮುಂದಿದ್ದ ಡಿಸಿಪಿ ಶರಣಪ್ಪ ಅವರ ಕಾರು, ಗಸ್ತು ವಾಹನವನ್ನು ಜಖಂಗೊಳಿಸಿದ್ದಾರೆ. ಕೈಯಲ್ಲಿ ರಾಡ್, ದೊಣ್ಣೆ ಹಿಡಿದು ಬಂದಿರುವ ಗುಂಪು ಆವೇಶದಿಂದ ವರ್ತಿಸುತ್ತಿದೆ. ಪೊಲೀಸರ ವಾಹನಕ್ಕೆ ಬೆಂಕಿ ಹಾಕಲಾಗಿದ್ದು ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. 50 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಇಕ್ಕಿದ್ದಾರೆ. ಪೊಲೀಸರು ಸೇರಿ ಹಲವರು ಘಟನೆಯಲ್ಲಿ ಗಾಯಗೊಂಡಿದ್ದಾರೆ.


ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಯ ಹತ್ತಿರದ ಸಂಬಂಧಿಕನೊಬ್ಬ, ಮಹಮ್ಮದ್ ಪೈಗಂಬರ್ ಬಗ್ಗೆ ಫೇಸ್ ಬುಕ್ ನಲ್ಲಿ ಹಾಕಿದ್ದ ಪೋಸ್ಟ್ ಕುರಿತು ಆಕ್ರೋಶ ವ್ಯಕ್ತವಾಗಿದೆ ಎನ್ನಲಾಗ್ತಿದೆ. ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಸಂದರ್ಭದಲ್ಲಿ ಡಿ. ಜೆ. ಹಳ್ಳಿ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಬಳಿಕ ಉದ್ರಿಕ್ತ ಜನರು ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ಮುಂದೆ ಬಂದು ಗಲಾಟೆ ಆರಂಭಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸ್ಥಳಕ್ಕೆ ಬಂದಿದ್ದು ಹೆಚ್ಚುವರಿ ಪಡೆಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm