ಬ್ರೇಕಿಂಗ್ ನ್ಯೂಸ್
11-08-20 05:54 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 11: ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಘಟನೆ ನಡೆದಿದ್ದು ಉದ್ರಿಕ್ತರ ಗುಂಪು ಶಾಸಕರ ಮನೆ ಹಾಗೂ ಪೊಲೀಸ್ ವಾಹನಗಳಿಗೂ ದಾಳಿ ನಡೆಸಿದ್ದಾರೆ.
ಪುಲಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಶಾಸಕರ ಮನೆಯ ಮತ್ತು ಠಾಣೆ ಎದುರು ಜನರು ಜಮಾಯಿಸಿದ್ದು, ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಠಾಣೆಯ ಮುಂದಿದ್ದ ಡಿಸಿಪಿ ಶರಣಪ್ಪ ಅವರ ಕಾರು, ಗಸ್ತು ವಾಹನವನ್ನು ಜಖಂಗೊಳಿಸಿದ್ದಾರೆ. ಕೈಯಲ್ಲಿ ರಾಡ್, ದೊಣ್ಣೆ ಹಿಡಿದು ಬಂದಿರುವ ಗುಂಪು ಆವೇಶದಿಂದ ವರ್ತಿಸುತ್ತಿದೆ. ಪೊಲೀಸರ ವಾಹನಕ್ಕೆ ಬೆಂಕಿ ಹಾಕಲಾಗಿದ್ದು ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. 50 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಇಕ್ಕಿದ್ದಾರೆ. ಪೊಲೀಸರು ಸೇರಿ ಹಲವರು ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಯ ಹತ್ತಿರದ ಸಂಬಂಧಿಕನೊಬ್ಬ, ಮಹಮ್ಮದ್ ಪೈಗಂಬರ್ ಬಗ್ಗೆ ಫೇಸ್ ಬುಕ್ ನಲ್ಲಿ ಹಾಕಿದ್ದ ಪೋಸ್ಟ್ ಕುರಿತು ಆಕ್ರೋಶ ವ್ಯಕ್ತವಾಗಿದೆ ಎನ್ನಲಾಗ್ತಿದೆ. ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಸಂದರ್ಭದಲ್ಲಿ ಡಿ. ಜೆ. ಹಳ್ಳಿ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಬಳಿಕ ಉದ್ರಿಕ್ತ ಜನರು ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ಮುಂದೆ ಬಂದು ಗಲಾಟೆ ಆರಂಭಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸ್ಥಳಕ್ಕೆ ಬಂದಿದ್ದು ಹೆಚ್ಚುವರಿ ಪಡೆಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm