ಬ್ರೇಕಿಂಗ್ ನ್ಯೂಸ್
11-08-20 05:54 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 11: ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಘಟನೆ ನಡೆದಿದ್ದು ಉದ್ರಿಕ್ತರ ಗುಂಪು ಶಾಸಕರ ಮನೆ ಹಾಗೂ ಪೊಲೀಸ್ ವಾಹನಗಳಿಗೂ ದಾಳಿ ನಡೆಸಿದ್ದಾರೆ.
ಪುಲಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಶಾಸಕರ ಮನೆಯ ಮತ್ತು ಠಾಣೆ ಎದುರು ಜನರು ಜಮಾಯಿಸಿದ್ದು, ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಠಾಣೆಯ ಮುಂದಿದ್ದ ಡಿಸಿಪಿ ಶರಣಪ್ಪ ಅವರ ಕಾರು, ಗಸ್ತು ವಾಹನವನ್ನು ಜಖಂಗೊಳಿಸಿದ್ದಾರೆ. ಕೈಯಲ್ಲಿ ರಾಡ್, ದೊಣ್ಣೆ ಹಿಡಿದು ಬಂದಿರುವ ಗುಂಪು ಆವೇಶದಿಂದ ವರ್ತಿಸುತ್ತಿದೆ. ಪೊಲೀಸರ ವಾಹನಕ್ಕೆ ಬೆಂಕಿ ಹಾಕಲಾಗಿದ್ದು ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. 50 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಇಕ್ಕಿದ್ದಾರೆ. ಪೊಲೀಸರು ಸೇರಿ ಹಲವರು ಘಟನೆಯಲ್ಲಿ ಗಾಯಗೊಂಡಿದ್ದಾರೆ.


ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಯ ಹತ್ತಿರದ ಸಂಬಂಧಿಕನೊಬ್ಬ, ಮಹಮ್ಮದ್ ಪೈಗಂಬರ್ ಬಗ್ಗೆ ಫೇಸ್ ಬುಕ್ ನಲ್ಲಿ ಹಾಕಿದ್ದ ಪೋಸ್ಟ್ ಕುರಿತು ಆಕ್ರೋಶ ವ್ಯಕ್ತವಾಗಿದೆ ಎನ್ನಲಾಗ್ತಿದೆ. ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಸಂದರ್ಭದಲ್ಲಿ ಡಿ. ಜೆ. ಹಳ್ಳಿ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಬಳಿಕ ಉದ್ರಿಕ್ತ ಜನರು ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ಮುಂದೆ ಬಂದು ಗಲಾಟೆ ಆರಂಭಿಸಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸ್ಥಳಕ್ಕೆ ಬಂದಿದ್ದು ಹೆಚ್ಚುವರಿ ಪಡೆಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm