ಬ್ರೇಕಿಂಗ್ ನ್ಯೂಸ್
30-04-26 11:53 am HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 30: ಕರ್ನಾಟಕದ ಹಲವು ಜಿಲ್ಲೆಗಳು ಇಂದು ಮತ್ತು ನಾಳೆ ವರುಣನ ಅಬ್ಬರಕ್ಕೆ ಸಿದ್ಧವಾಗುತ್ತಿದ್ದು, ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ಉಷ್ಣಾಂಶ ಮತ್ತು ತೇವಾಂಶ ಮುಂದುವರಿದರೂ, ಕೆಲವು ಕಡೆ ಗುಡುಗು-ಮಿಂಚಿನ ಆರ್ಭಟ ಮಾತ್ರ ಕಂಡುಬರುವ ಸಾಧ್ಯತೆ ಇದೆ.
ಭಾರತ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯ ಸಾಧ್ಯತೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ತುಮಕೂರು, ಚಾಮರಾಜನಗರ ಹಾಗೂ ಮೇ 1ರಂದು ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗುಡುಗು, ಆಲಿಕಲ್ಲು ಸಹಿತ ಸಾಧಾರಣ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇತ್ತೀಚಿನ ಮಳೆಯಿಂದ ಬೆಂಗಳೂರಿನಲ್ಲಿ ತಾಪಮಾನ ಗಣನೀಯವಾಗಿ ಇಳಿಕೆಯಾಗಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬುಧವಾರ ಸಂಜೆ ಸುರಿದ ಮಳೆಯಲ್ಲಿ ಒಟ್ಟು 111.5 ಮಿಮೀ ಮಳೆಯಾಗಿದ್ದು, ಗಾಳಿಯ ವೇಗ ಗಂಟೆಗೆ 75 ಕಿ.ಮೀ. ದಾಖಲಾಗಿದೆ. ಕಳೆದ ಕೆಲವು ವಾರಗಳಿಂದ 36-39 ಡಿಗ್ರಿವರೆಗೆ ಏರಿದ್ದ ಉಷ್ಣಾಂಶಕ್ಕೆ ಇದರಿಂದ ತಾತ್ಕಾಲಿಕ ತಣ್ಣನೆಯ ವಾತಾವರಣ ಉಂಟಾಗಿದೆ.
ಹವಾಮಾನ ತಜ್ಞರ ಪ್ರಕಾರ, ಹೆಚ್ಚಿದ ತಾಪಮಾನದಿಂದ ಉಂಟಾದ ಸಂವಹನ ಪ್ರಕ್ರಿಯೆ (ಕನ್ವೆಕ್ಟಿವ್ ಆಕ್ಟಿವಿಟಿ), ಕೆಳಮಟ್ಟದ ಗಾಳಿಯ ಅಸ್ಥಿರತೆ ಮತ್ತು ತೇವಾಂಶದ ಸಂಯೋಜನೆಯೇ ಆಲಿಕಲ್ಲು ಮಳೆಯ ಪ್ರಮುಖ ಕಾರಣವಾಗಿದೆ.
ಇದರ ಜೊತೆಗೆ ಕೇರಳ ರಾಜ್ಯದಲ್ಲೂ ಮುಂದಿನ ನಾಲ್ಕು ದಿನಗಳವರೆಗೆ ಬೇಸಿಗೆ ಮಳೆಯ ಸಾಧ್ಯತೆ ಇದ್ದು, ಕಣ್ಣೂರು, ಕಾಸರಗೋಡು ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಡುಗು-ಮಿಂಚು ಹಾಗೂ ಭಾರಿ ಮಳೆಯ ಸಮಯದಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯ. ವಿದ್ಯುತ್ ಕಂಬಗಳು, ಮರಗಳು ಮತ್ತು ನೀರು ತುಂಬಿದ ಪ್ರದೇಶಗಳಿಂದ ದೂರವಿರುವುದು ಅಪಾಯ ತಪ್ಪಿಸಲು ಸಹಕಾರಿಯಾಗಲಿದೆ.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm