ಬ್ರೇಕಿಂಗ್ ನ್ಯೂಸ್
01-05-26 08:33 pm HK News Staffer ಕರ್ನಾಟಕ
ಬೆಂಗಳೂರು, ಮೇ 01: ಮಲ್ಲಿಕಾರ್ಜುನ ಖರ್ಗೆ ಅವರು ಬದಲಾವಣೆ ಇಲ್ಲ ಎಂದಿರುವಾಗ ಎಲ್ಲ ಫುಲ್ ಸ್ಟಾಪ್ ಅಂತ ಅರ್ಥ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಬದಲಾವಣೆ ಇಲ್ಲ ಎಂಬ ಖರ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಖರ್ಗೆಯವರು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು. ಅಪಾರವಾದ ಅನುಭವ ಇರುವವರು. ರಾಜ್ಯಕ್ಕೆ ಬದಲಾವಣೆ ಆಗೋದಾದ್ರೆ, ಅವರು ಬಂದರೆ ಅವರ ಅನುಭವದ ಮುಂದೆ ಮಾತಾಡೋಕೆ ಆಗಲ್ಲ. ಸದ್ಯಕ್ಕೆ ಸಿಎಂ ಇದ್ದಾರೆ, ಮತ್ತೆ ಬದಲಾವಣೆ ಮಾಡುವ ಪ್ರಶ್ನೆ ಈಗಂತೂ ಸದ್ಯಕ್ಕೆ ಇಲ್ಲ ಎಂದು ಖರ್ಗೆ ಹೇಳಿದ್ದಾರೆ ಎಂದು ತಿಳಿಸಿದರು.
ಇದನ್ನು ನಾನು ಸ್ವಾಗತ ಮಾಡುತ್ತೇನೆ. ಅವರು ಹೇಳಿದ ಮೇಲೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ವೇಣುಗೋಪಾಲ್, ಸುರ್ಜೆವಾಲ ಎಲ್ಲರೂ ಕುಳಿತು ಮಾತನಾಡಿ ಅಭಿಪ್ರಾಯ ಬಂದಿರುತ್ತೆ ಎಂಬುದು ನನ್ನ ಭಾವನೆ. ಅವರ ಮಾತಿಗೆ ಬಹಳ ಪ್ರಾಮುಖ್ಯತೆ ಇರುತ್ತದೆ.
ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯ ನಡುವೆಯೂ ಗೊಂದಲ ವಿಚಾರವಾಗಿ ಮಾತನಾಡಿ, ಬೇರೆ ಬೇರೆಯವರು ಹೇಳುತ್ತಾರೆ, ನಮ್ಮ ಅಭಿಪ್ರಾಯದಲ್ಲಿ ಖರ್ಗೆ ಅವರು ಸುಪ್ರೀಂ ಅಥಾರಿಟಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹೈಕಮಾಂಡ್ ಅವರ ಬಾಯಿಂದ ಮಾತು ಬರುತ್ತದೆ ಎಂದರೆ ಅದನ್ನು ಒಪ್ಪಿಕೊಳ್ಳಬೇಕು. ಅಲ್ಲಿಗೆ ಅಧ್ಯಾಯ ಮುಗಿಯಿತು. ಹೆಚ್ಚು ವ್ಯಾಖ್ಯಾನ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಪ್ರತಿಕ್ರಿಯೆ ನೀಡಿದರು.
ಪಂಚರಾಜ್ಯದ ಸಮೀಕ್ಷೆ ವಿಚಾರವಾಗಿ ಮಾತನಾಡಿ, ಸಮೀಕ್ಷೆ ಒಂದೊಂದು ಬಾರಿ ಹೇಗಾಗುತ್ತೆ ಅಂತ ನೋಡಿದ್ದೇವೆ. ಗ್ರೌಂಡ್ ರಿಯಾಲಿಟಿಯನ್ನು ನೋಡಿದ್ದೇವೆ. ಕೇರಳದಲ್ಲಿ ನಮ್ಮ ಸರ್ಕಾರ ಬರುತ್ತದೆ ಅಂತ ಆಶಾವಾದಿಗಳಾಗಿದ್ದೇವೆ. ರಾಜ್ಯದ ಹಲವರು ಅಲ್ಲಿನ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ನಾವು ಬರುತ್ತೇವೆ ಎಂದು ವರದಿ ಇದೆ. ಬಂಗಾಳದಲ್ಲಿ ನಡೆದಿರೋ ಘಟನೆ ನೋಡಿದ್ರೆ, ಚುನಾವಣಾ ಆಯೋಗ ಯಾವ ರೀತಿ ಕೆಲಸ ಮಾಡಿದೆ ಎಂದು ನೋಡಿದ್ದೇವೆ. ಅಲ್ಲಿ ಹೋಗಿ ಬಂದ ಅಬ್ಸರ್ವರ್ಗಳನ್ನು ಮಾತಾಡಿಸಿದೆ. ಮೇಡಂ ಅವರಿಗೆ ಬರುವ ಅವಕಾಶ ಇದೆ ಎಂದಿದ್ದಾರೆ. ಕೆಲವು ಮಿಶ್ರ ಪ್ರತಿಕ್ರಿಯೆ ಇದೆ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಡಿಎಂಕೆ ಬರುತ್ತದೆ ಎಂದಿದ್ದಾರೆ. ಅಸ್ಸಾಂನಲ್ಲಿನ ಸಮೀಕ್ಷೆ ಬಿಜೆಪಿ ಬರುತ್ತದೆ ಎಂದಿದೆ ಎಂದು ತಿಳಿಸಿದರು.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm