ಬ್ರೇಕಿಂಗ್ ನ್ಯೂಸ್
01-05-26 08:33 pm HK News Staffer ಕರ್ನಾಟಕ
ಬೆಂಗಳೂರು, ಮೇ 01: ಮಲ್ಲಿಕಾರ್ಜುನ ಖರ್ಗೆ ಅವರು ಬದಲಾವಣೆ ಇಲ್ಲ ಎಂದಿರುವಾಗ ಎಲ್ಲ ಫುಲ್ ಸ್ಟಾಪ್ ಅಂತ ಅರ್ಥ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಬದಲಾವಣೆ ಇಲ್ಲ ಎಂಬ ಖರ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಖರ್ಗೆಯವರು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು. ಅಪಾರವಾದ ಅನುಭವ ಇರುವವರು. ರಾಜ್ಯಕ್ಕೆ ಬದಲಾವಣೆ ಆಗೋದಾದ್ರೆ, ಅವರು ಬಂದರೆ ಅವರ ಅನುಭವದ ಮುಂದೆ ಮಾತಾಡೋಕೆ ಆಗಲ್ಲ. ಸದ್ಯಕ್ಕೆ ಸಿಎಂ ಇದ್ದಾರೆ, ಮತ್ತೆ ಬದಲಾವಣೆ ಮಾಡುವ ಪ್ರಶ್ನೆ ಈಗಂತೂ ಸದ್ಯಕ್ಕೆ ಇಲ್ಲ ಎಂದು ಖರ್ಗೆ ಹೇಳಿದ್ದಾರೆ ಎಂದು ತಿಳಿಸಿದರು.
ಇದನ್ನು ನಾನು ಸ್ವಾಗತ ಮಾಡುತ್ತೇನೆ. ಅವರು ಹೇಳಿದ ಮೇಲೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ವೇಣುಗೋಪಾಲ್, ಸುರ್ಜೆವಾಲ ಎಲ್ಲರೂ ಕುಳಿತು ಮಾತನಾಡಿ ಅಭಿಪ್ರಾಯ ಬಂದಿರುತ್ತೆ ಎಂಬುದು ನನ್ನ ಭಾವನೆ. ಅವರ ಮಾತಿಗೆ ಬಹಳ ಪ್ರಾಮುಖ್ಯತೆ ಇರುತ್ತದೆ.
ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯ ನಡುವೆಯೂ ಗೊಂದಲ ವಿಚಾರವಾಗಿ ಮಾತನಾಡಿ, ಬೇರೆ ಬೇರೆಯವರು ಹೇಳುತ್ತಾರೆ, ನಮ್ಮ ಅಭಿಪ್ರಾಯದಲ್ಲಿ ಖರ್ಗೆ ಅವರು ಸುಪ್ರೀಂ ಅಥಾರಿಟಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹೈಕಮಾಂಡ್ ಅವರ ಬಾಯಿಂದ ಮಾತು ಬರುತ್ತದೆ ಎಂದರೆ ಅದನ್ನು ಒಪ್ಪಿಕೊಳ್ಳಬೇಕು. ಅಲ್ಲಿಗೆ ಅಧ್ಯಾಯ ಮುಗಿಯಿತು. ಹೆಚ್ಚು ವ್ಯಾಖ್ಯಾನ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಪ್ರತಿಕ್ರಿಯೆ ನೀಡಿದರು.
ಪಂಚರಾಜ್ಯದ ಸಮೀಕ್ಷೆ ವಿಚಾರವಾಗಿ ಮಾತನಾಡಿ, ಸಮೀಕ್ಷೆ ಒಂದೊಂದು ಬಾರಿ ಹೇಗಾಗುತ್ತೆ ಅಂತ ನೋಡಿದ್ದೇವೆ. ಗ್ರೌಂಡ್ ರಿಯಾಲಿಟಿಯನ್ನು ನೋಡಿದ್ದೇವೆ. ಕೇರಳದಲ್ಲಿ ನಮ್ಮ ಸರ್ಕಾರ ಬರುತ್ತದೆ ಅಂತ ಆಶಾವಾದಿಗಳಾಗಿದ್ದೇವೆ. ರಾಜ್ಯದ ಹಲವರು ಅಲ್ಲಿನ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ನಾವು ಬರುತ್ತೇವೆ ಎಂದು ವರದಿ ಇದೆ. ಬಂಗಾಳದಲ್ಲಿ ನಡೆದಿರೋ ಘಟನೆ ನೋಡಿದ್ರೆ, ಚುನಾವಣಾ ಆಯೋಗ ಯಾವ ರೀತಿ ಕೆಲಸ ಮಾಡಿದೆ ಎಂದು ನೋಡಿದ್ದೇವೆ. ಅಲ್ಲಿ ಹೋಗಿ ಬಂದ ಅಬ್ಸರ್ವರ್ಗಳನ್ನು ಮಾತಾಡಿಸಿದೆ. ಮೇಡಂ ಅವರಿಗೆ ಬರುವ ಅವಕಾಶ ಇದೆ ಎಂದಿದ್ದಾರೆ. ಕೆಲವು ಮಿಶ್ರ ಪ್ರತಿಕ್ರಿಯೆ ಇದೆ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಡಿಎಂಕೆ ಬರುತ್ತದೆ ಎಂದಿದ್ದಾರೆ. ಅಸ್ಸಾಂನಲ್ಲಿನ ಸಮೀಕ್ಷೆ ಬಿಜೆಪಿ ಬರುತ್ತದೆ ಎಂದಿದೆ ಎಂದು ತಿಳಿಸಿದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm