ಬ್ರೇಕಿಂಗ್ ನ್ಯೂಸ್
02-05-26 04:48 pm HK News Staffer ಕರ್ನಾಟಕ
ತುಮಕೂರು, ಮೇ 2: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ತೀವ್ರ ಬಿಸಿಲಿನಿಂದ ನವಿಲುಗಳು ಸಾವನ್ನಪ್ಪಿದ್ದಾಗಿ ಹೇಳಲಾಗಿತ್ತು. ಆದರೆ ಪ್ರಯೋಗಾಲಯದ ವರದಿಗಳು ನವಿಲುಗಳ ಸಾವಿಗೆ ಹಕ್ಕಿಜ್ವರ (H5N1) ಸೋಂಕು ಕಾರಣ ಎಂದು ಹೇಳಿವೆ. ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ 44 ನವಿಲು ಸಾವನ್ನಪ್ಪಿದ್ದು ಭಾರೀ ಆತಂಕಕ್ಕೀಡು ಮಾಡಿತ್ತು.
ಏಪ್ರಿಲ್ 16ರಿಂದ 24ರ ನಡುವೆ, ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಗ್ರಾಮಗಳಲ್ಲಿ ನವಿಲುಗಳ ಸಾವು ವರದಿಯಾಗಿತ್ತು. ಕಾರ್ಯಾಚರಣೆ ಸಮಯದಲ್ಲಿ ಕೆಸರಮಾಡು, ಹಿರೇಹಳ್ಳಿ ಮತ್ತು ಗೂಳೂರು ಗ್ರಾಮ ಪಂಚಾಯತ್ಗಳ ವ್ಯಾಪ್ತಿಯ ಕೃಷಿ ಹೊಲಗಳಲ್ಲಿ ನವಿಲುಗಳ ಸಾವಿನ ಬಗ್ಗೆ ವರದಿಯಾಗಿರುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದರು. ತೀವ್ರ ಬಿಸಿಲಿನ ಕಾರಣದಿಂದ ಸಾವು ಆಗಿರುವುದಾಗಿ ಅಧಿಕಾರಿಗಳು ಸಮಜಾಯಿಷಿ ನೀಡಿದ್ದರು.
ಆದರೆ ಮೃತ ನವಿಲುಗಳಿಂದ ಸಂಗ್ರಹಿಸಲಾದ ಮಾದರಿಗಳನ್ನು ಭೋಪಾಲ್ನಲ್ಲಿರುವ ICAR ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದರ ವರದಿ H5N1 ಸಾವಿಗೆ ಕಾರಣ ಎಂದು ದೃಢಪಡಿಸಿದೆ. ಆದಾಗ್ಯೂ, ಏಪ್ರಿಲ್ 23 ರಿಂದ ತುಮಕೂರು ತಾಲ್ಲೂಕಿನ ಯಾವುದೇ ಭಾಗದಲ್ಲಿ ಹೊಸ ಸಾವುಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯೋಗಾಲಯದ ವರದಿಗಳು, H5N1 ಸೋಂಕಿನಿಂದ ನವಿಲುಗಳು ಸಾವನ್ನಪ್ಪಿವೆ ಎಂದು ದೃಢಪಡಿಸಿವೆ. ಸೋಂಕನ್ನು ತಡೆಗಟ್ಟಲು ಅರಣ್ಯ ಇಲಾಖೆಯು ಆರೋಗ್ಯ ಮತ್ತು ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಗಳೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಸೋಂಕು ಹರಡುವುದನ್ನು ತಪ್ಪಿಸಲು ತುಮಕೂರು ಜಿಲ್ಲಾಡಳಿತವು 33 ಗ್ರಾಮಗಳಲ್ಲಿ ಅಲರ್ಟ್ ಸೂಚನೆ ನೀಡಿದೆ. ಸೋಂಕು ಪೀಡಿತ ಪ್ರದೇಶಗಳ 10 ಕಿಮೀ ವ್ಯಾಪ್ತಿಯಲ್ಲಿ ಕಂಟೋನ್ಮೆಂಟ್ ವಲಯವನ್ನು ಘೋಷಿಸಲಾಗಿದೆ. ವಲಯದೊಳಗಿನ ಎಲ್ಲಾ ಕೋಳಿ ಸಾಕಣೆ ಕೇಂದ್ರಗಳಿಗೆ ಪ್ರೋಟೋಕಾಲ್ ಪ್ರಕಾರ ಎಚ್ಚರಿಕೆ ನೀಡಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm