ಬ್ರೇಕಿಂಗ್ ನ್ಯೂಸ್
02-05-26 04:48 pm HK News Staffer ಕರ್ನಾಟಕ
ತುಮಕೂರು, ಮೇ 2: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ತೀವ್ರ ಬಿಸಿಲಿನಿಂದ ನವಿಲುಗಳು ಸಾವನ್ನಪ್ಪಿದ್ದಾಗಿ ಹೇಳಲಾಗಿತ್ತು. ಆದರೆ ಪ್ರಯೋಗಾಲಯದ ವರದಿಗಳು ನವಿಲುಗಳ ಸಾವಿಗೆ ಹಕ್ಕಿಜ್ವರ (H5N1) ಸೋಂಕು ಕಾರಣ ಎಂದು ಹೇಳಿವೆ. ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ 44 ನವಿಲು ಸಾವನ್ನಪ್ಪಿದ್ದು ಭಾರೀ ಆತಂಕಕ್ಕೀಡು ಮಾಡಿತ್ತು.
ಏಪ್ರಿಲ್ 16ರಿಂದ 24ರ ನಡುವೆ, ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಗ್ರಾಮಗಳಲ್ಲಿ ನವಿಲುಗಳ ಸಾವು ವರದಿಯಾಗಿತ್ತು. ಕಾರ್ಯಾಚರಣೆ ಸಮಯದಲ್ಲಿ ಕೆಸರಮಾಡು, ಹಿರೇಹಳ್ಳಿ ಮತ್ತು ಗೂಳೂರು ಗ್ರಾಮ ಪಂಚಾಯತ್ಗಳ ವ್ಯಾಪ್ತಿಯ ಕೃಷಿ ಹೊಲಗಳಲ್ಲಿ ನವಿಲುಗಳ ಸಾವಿನ ಬಗ್ಗೆ ವರದಿಯಾಗಿರುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದರು. ತೀವ್ರ ಬಿಸಿಲಿನ ಕಾರಣದಿಂದ ಸಾವು ಆಗಿರುವುದಾಗಿ ಅಧಿಕಾರಿಗಳು ಸಮಜಾಯಿಷಿ ನೀಡಿದ್ದರು.
ಆದರೆ ಮೃತ ನವಿಲುಗಳಿಂದ ಸಂಗ್ರಹಿಸಲಾದ ಮಾದರಿಗಳನ್ನು ಭೋಪಾಲ್ನಲ್ಲಿರುವ ICAR ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದರ ವರದಿ H5N1 ಸಾವಿಗೆ ಕಾರಣ ಎಂದು ದೃಢಪಡಿಸಿದೆ. ಆದಾಗ್ಯೂ, ಏಪ್ರಿಲ್ 23 ರಿಂದ ತುಮಕೂರು ತಾಲ್ಲೂಕಿನ ಯಾವುದೇ ಭಾಗದಲ್ಲಿ ಹೊಸ ಸಾವುಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯೋಗಾಲಯದ ವರದಿಗಳು, H5N1 ಸೋಂಕಿನಿಂದ ನವಿಲುಗಳು ಸಾವನ್ನಪ್ಪಿವೆ ಎಂದು ದೃಢಪಡಿಸಿವೆ. ಸೋಂಕನ್ನು ತಡೆಗಟ್ಟಲು ಅರಣ್ಯ ಇಲಾಖೆಯು ಆರೋಗ್ಯ ಮತ್ತು ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆಗಳೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಸೋಂಕು ಹರಡುವುದನ್ನು ತಪ್ಪಿಸಲು ತುಮಕೂರು ಜಿಲ್ಲಾಡಳಿತವು 33 ಗ್ರಾಮಗಳಲ್ಲಿ ಅಲರ್ಟ್ ಸೂಚನೆ ನೀಡಿದೆ. ಸೋಂಕು ಪೀಡಿತ ಪ್ರದೇಶಗಳ 10 ಕಿಮೀ ವ್ಯಾಪ್ತಿಯಲ್ಲಿ ಕಂಟೋನ್ಮೆಂಟ್ ವಲಯವನ್ನು ಘೋಷಿಸಲಾಗಿದೆ. ವಲಯದೊಳಗಿನ ಎಲ್ಲಾ ಕೋಳಿ ಸಾಕಣೆ ಕೇಂದ್ರಗಳಿಗೆ ಪ್ರೋಟೋಕಾಲ್ ಪ್ರಕಾರ ಎಚ್ಚರಿಕೆ ನೀಡಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm