ಬ್ರೇಕಿಂಗ್ ನ್ಯೂಸ್
04-05-26 04:14 pm HK News Staffer ಕರ್ನಾಟಕ
ಕಾಸರಗೋಡು, ಮೇ 4: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಕಾಸರಗೋಡು ವಿಧಾನಸಭೆ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಮುಸ್ಲಿಂ ಲೀಗಿನ ಮಾಹಿನ್ ಹಾಜಿ ಗೆಲವು ಸಾಧಿಸಿದ್ದಾರೆ.
ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಎನ್ ಡಿಎ ಮತ್ತು ಯುಡಿಎಫ್ ಮಧ್ಯೆ ತೀವ್ರ ಸ್ಪರ್ಧೆ ಕಂಡುಬಂದಿತ್ತು. ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂಎಲ್ 8ನೇ ಹಂತದ ಮತ ಎಣಿಕೆಯ ನಂತರ ಒಂದಷ್ಟು ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರು. ಬಳಿಕ ಮುಸ್ಲಿಂ ಲೀಗ್ ಕಲ್ಲಟ್ರ ಮಾಹೀನ್ ಹಾಜಿ ಮುನ್ನಡೆ ಸಾಧಿಸಿ ಸ್ಪಷ್ಟ ಗೆಲುವಿನತ್ತ ಸಾಗಿದ್ದಾರೆ.
ಮುಸ್ಲಿಂ ಲೀಗ್ ಕಲ್ಲಟ್ರ ಮಾಹೀನ್ ಹಾಜಿ ಅವರು 76,396 ಮತಗಳನ್ನು ಪಡೆದರೆ, ನಿಕಟ ಪ್ರತಿಸ್ಪರ್ಧಿ ಎನ್ ಡಿಎ ಅಭ್ಯರ್ಥಿ ಅಶ್ವಿನಿ ಎಂಎಲ್ 53,698 ಮತಗಳನ್ನು ಪಡೆದಿದ್ದಾರೆ. ಯುಡಿಎಫ್ ಅಭ್ಯರ್ಥಿ ಮಾಹಿನ್ ಹಾಜಿ ಬರೋಬ್ಬರಿ 22,698 ಮತಗಳಿಂದ ಗೆಲವನ್ನು ಸಾಧಿಸಿದ್ದಾರೆ. ಸಿಪಿಎಂ ಅಭ್ಯರ್ಥಿಯಾಗಿದ್ದ ಶಾನವಾಸ್ ಪಾದೂರು(36,678) ಹೆಚ್ಚು ಮತಗಳನ್ನು ಪಡೆದರೆ ಬಿಜೆಪಿ ಗೆಲ್ಲಬಹುದೆಂಬ ನಿರೀಕ್ಷೆ ಇತ್ತು.
ಕೇರಳದಲ್ಲಿ ಬಿಜೆಪಿ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಕ್ಷೇತ್ರಗಳಲ್ಲಿ ಕಾಸರಗೋಡು ಕೂಡ ಒಂದು. ಅಶ್ವಿನಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಏಕೈಕ ಹಿಂದು ಮಹಿಳೆಯಾಗಿದ್ದು ಮಹಿಳೆಯರ ಮತದ ನಿರೀಕ್ಷೆಯಲ್ಲಿದ್ದರು. ಆದರೆ ಮಹಿಳೆಯರ ಮತಗಳನ್ನು ಪರಿವರ್ತಿಸಿಕೊಳ್ಳಲು ಸಾಧ್ಯವಾಗಿಲ್ಲ. ಮುಸ್ಲಿಂ ಮತಗಳ ಧ್ರುವೀಕರಣ ಆಗಿರುವುದು, ಸಿಪಿಎಂ ಅಭ್ಯರ್ಥಿ ಶಾನವಾಸ್ ನಿರೀಕ್ಷೆಯಷ್ಟು ಮತ ಪಡೆಯಲು ಸೋತಿದ್ದು ಲೀಗ್ ಅಭ್ಯರ್ಥಿ ಗೆಲುವನ್ನು ಸುಲಭವಾಗಿಸಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm