ಬ್ರೇಕಿಂಗ್ ನ್ಯೂಸ್
04-05-26 06:27 pm HK News Staffer ಕರ್ನಾಟಕ
ಕಾಸರಗೋಡು, ಮೇ 4: ಭಾರೀ ಪೈಪೋಟಿ ನಿರೀಕ್ಷಿಸಿದ್ದ ಮಂಜೇಶ್ವರ ಕ್ಷೇತ್ರದಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿ ಎಕೆಎಂ ಅಶ್ರಫ್ ಎರಡನೇ ಬಾರಿಗೆ ಭಾರೀ ಅಂತರದ ಜಯ ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಮುಸ್ಲಿಂ ಮತಗಳ ಧ್ರುವೀಕರಣದಿಂದಾಗಿ ಅಶ್ರಫ್ ಅವರು 29252 ಮತಗಳ ಅಂತರದಿಂದ ಜಯಭೇರಿ ಸಾಧಿಸಿದ್ದಾರೆ.
ನಿಕಟ ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ 67696 ಮತಗಳನ್ನು ಪಡೆದಿದ್ದರೆ, ಸಿಪಿಎಂ ಪಕ್ಷದ ಕೆ.ಆರ್ ಜಯಾನಂದ್ ಕೇವಲ 21212 ಮತಗಳನ್ನು ಪಡೆದು ಹೀನಾಯ ಸೋಲನುಭವಿಸಿದ್ದಾರೆ. ಉಳಿದಂತೆ, ಪಕ್ಷೇತರ ಸ್ಪರ್ಧಿಸಿದ್ದ ಜೀನ್ ಲವಿನಾ ಮೊಂತೇರೊ 523, ಕಣ್ಣೂರು ಅಬ್ದಲ್ಲ ಮಾಸ್ಟರ್ 283, ಬಿಎಸ್ಪಿಯಿಂದ ಸ್ಪರ್ಧಿಸಿದ್ದ ಸಂಜೀವ 213 ಮತ ಪಡೆದಿದ್ದಾರೆ.

ಈ ಹಿಂದೆ ಮಂಜೇಶ್ವರದಲ್ಲಿ ಎರಡು ಬಾರಿ ಬಿಜೆಪಿಯ ಸುರೇಂದ್ರನ್ ಅತಿ ಕಡಿಮೆ ಅಂತರದಿಂದ ಸೋಲು ಕಂಡಿದ್ದರಿಂದ ಈ ಬಾರಿ ಗೆಲುವಿನ ಭರವಸೆ ಹುಟ್ಟಿಸಿದ್ದರು. ಇದಕ್ಕಾಗಿ ಬಿಜೆಪಿಯಿಂದ ಭಾರೀ ಶ್ರಮ ಹಾಕಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು, ಪಕ್ಷದ ಮುಖಂಡರು ತಿಂಗಳ ಕಾಲ ಪ್ರಚಾರದಲ್ಲಿ ತೊಡಗಿದ್ದರು. 2016ರಲ್ಲಿ 89 ಮತಗಳಿಂದ ಸೋತಿದ್ದರೆ, 2021ರಲ್ಲಿ ಸುರೇಂದ್ರನ್ 645 ಮತಗಳ ಅಂತರದಿಂದ ಸೋಲು ಕಂಡಿದ್ದರು.
ಈ ಬಾರಿ ಮತ ಪರಿಷ್ಕರಣೆ ಬಳಿಕ ನಡೆದ ಚುನಾವಣೆಯಲ್ಲಿ ಕೇರಳದಲ್ಲಿ ಮಂಜೇಶ್ವರ, ಕಾಸರಗೋಡು, ತಿರುವನಂತಪುರಂ, ಪಾಲಕ್ಕಾಡ್ ಸೇರಿ ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಭರವಸೆ ಹುಟ್ಟಿಸಿತ್ತು. ಆದರೆ ನಿರೀಕ್ಷಿತ ಫಲಿತಾಂಶ ಸಿಗಲಿಲ್ಲ. ಮಂಜೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರೇ ದಿಗಿಲಾಗುವಂತೆ ಮತ ಗಳಿಕೆ ಪ್ರಮಾಣವೇ ಭಾರೀ ಕಡಿಮೆಯಾಗಿದೆ. ಕಮ್ಯುನಿಸ್ಟ್ ಪಕ್ಷಕ್ಕೆ ಬೀಳುತ್ತಿದ್ದ ಮತಗಳೇ ಖೋತಾ ಆಗಿದ್ದು ಈವರೆಗಿನ ಇತಿಹಾಸದಲ್ಲಿ ಅತಿ ಕಡಿಮೆ ಮತಗಳನ್ನು ಗಳಿಸಲಷ್ಟೆ ಎಡರಂಗ ಶಕ್ತವಾಗಿದೆ. ಬಿಜೆಪಿಗೂ ಸಾಂಪ್ರದಾಯಿಕ ಮತಗಳಷ್ಟೇ ಬಿದ್ದಿದ್ದು ಹೆಚ್ಚುವರಿ ಸಾಧನೆಯಾಗದಿರುವುದು ಕಂಡುಬಂದಿದೆ.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm